ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿಯಲ್ಲಿ ಬೋಳ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೋಳ ವಂಜಾರಕಟ್ಟೆ ನಿವಾಸಿ ಬರಬೈಲು ಶಾಲೆಯ ಮುಖ್ಯ ಶಿಕ್ಷಕ ಹಾಗೂ ವಂಜಾರಕಟ್ಟೆ ಇಟ್ಟೋಡಿ ಶ್ರೀ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ (58) ಬಂಧಿತ ಆರೋಪಿ.
ರಾಜೇಂದ್ರ ಆಚಾರ್ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಅನೇಕ ದೂರುಗಳಿದ್ದವು. ಉಡುಪಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಾ ಇಲಾಖೆಯ ಅಧಿಕಾರಿಗಳು ಶಾಲೆಗೆ ಆಗಮಿಸಿ ಸಮಗ್ರ ತನಿಖೆ ನಡೆಸಿದ್ದು, ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರಿಂದ ದೂರು ಪಡೆದುಕೊಂಡಿದ್ದರು. ರಾಜೇಂದ್ರನ ಒಟ್ಟು ವಿರುದ್ಧ 14 ವಿದ್ಯಾರ್ಥಿನಿಯರು ದೂರು ನೀಡಿದ್ದರು.
ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸ್ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಲಾಗಿದೆ. ರಾಜೇಂದ್ರ ಆಚಾರ್ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಶಾಲೆಯಲ್ಲೂ ಇದೇ ರೀತಿಯ ಆರೋಪಗಳಿದ್ದವು.