ಚಿತ್ರದುರ್ಗ: ಖಾಸಗಿ ಬಸ್ ಪಲ್ಟಿಯಾಗಿ ಮೂವರರೂ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಹೊಳಲ್ಕೆರೆ ಪಟ್ಟಣದ ಬಳಿಯ ಕಣಿವೆ ಪ್ರದೇಶದಲ್ಲಿ ನಡೆದಿದೆ.
ಬಸ್ನಲ್ಲಿ10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕೂಡಲೇ ಗಾಯಾಳುಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಬೆಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್ ಇದಾಗಿದ್ದು, 50 ಜನ ಪ್ರಯಾಣಿಸುತ್ತಿದ್ದ ಮಾಹಿತಿ ದೊರೆತಿದೆ.
ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ ಐ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.