Sunday, May 12, 2024

ಯುವಕನ ಉಸಿರು ಕಸಿದ BBMP ಕಸದ ಲಾರಿ

ಬೆಂಗಳೂರು : ಬಿಬಿಎಂಪಿ ಕಸದ ಲಾರಿ ಓಡಿಶಾ ಮೂಲಕ ಯುವಕನ ಉಸಿರು ಕಸಿದಿರುವ ಘಟನೆ ಬೆಂಗಳೂರಿನಲ್ಲಿ ತಡರಾತ್ರಿ ನಡೆದಿದೆ.

ನಿಂತಿದ್ದ ಕಸದ ಲಾರಿಗೆ ಹಿಂಬದಿಯಿಂದ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಟೆಕ್ಕಿ ಸಾವನ್ನಪ್ಪಿದ್ದಾರೆ. ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಗತ್ತ್ ಜಂಕ್ಷನ್​ನಲ್ಲಿ ಘಟನೆ ನಡೆದಿದೆ.

ಓಡಿಶಾ ಮೂಲದ ಸಾಗರ್ (23) ಸಾವನ್ನಪ್ಪಿದ ಟೆಕ್ಕಿ. ನಿನ್ನೆ ತಡರಾತ್ರಿ‌10.30 ರ ವೇಳೆ ಘಟನೆ ನಡೆದಿದೆ. ಈತನ ಜೊತೆಗಿದ್ದ ಇನ್ನುಳಿದ ನಾಲ್ವರು ಟೆಕ್ಕಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಸಹ ಮೂಲತಃ ಓಡಿಶಾದವರು ಎಂದು ತಿಳಿದುಬಂದಿದೆ.

ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಕೊಡಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ವೈಟ್​ ಫೀಲ್ಡ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವೈಟ್ ಫೀಲ್ಡ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES