Friday, May 17, 2024

ಬಿಸಿಲಿನ ತಾಪಕ್ಕೆ ಪ್ರಜ್ಞೆತಪ್ಪಿ ಮರದಲ್ಲೇ 45 ನಿಮಿಷ ನೇತಾಡಿದ ಯುವಕ

ಹಾಸನ : ತೆಂಗಿನ ಗರಿಗಳನ್ನು ಕತ್ತರಿಸಲು ಮರ ಏರಿದ ಯುವಕ ಬಿಸಿಲ ತಾಪಕ್ಕೆ ತೆಂಗಿನ ಮರದಲ್ಲೇ ಪ್ರಜ್ಞೆತಪ್ಪಿ ಮರದಲ್ಲೇ ನೇತಾಡಿದ್ದು ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿರವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ನವೀನ್​ (21) ಪ್ರಜ್ಞೆತಪ್ಪಿ ಮರದಲ್ಲೇ ನೇತಾಡಿದ ಯುವಕ, ಗ್ರಾಮದ ಮಂಜು ಎಂಬುವವರಿಗೆ ಸೇರಿದ ತೆಂಗಿನಮರದ ಗರಿಗಳನ್ನು ಕತ್ತರಿಸಲು ನವೀನ್​ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಮರವೇರಿದ್ದ, ತೆಂಗಿನ ಗರಿಗಳನ್ನು ಕತ್ತರಿಸಿ ಮರದಿಂದ ಕೆಳಗೆ ಇಳಿಯುವ ವೇಳೆ ಬಿಸಿಲಿನ ತಾಪಕ್ಕೆ ಪ್ರಜ್ಞಾಹೀನನಾಗಿ ಸುಮಾರು 50 ಅಡಿ ಎತ್ತರದಲ್ಲಿ 45 ನಿಮಿಷಗಳ ಕಾಲ ತೆಂಗಿನ ಮರದಲ್ಲೇ ನೇತಾಡಿದ್ದಾನೆ.

ಇದನ್ನೂ ಓದಿ: ಸಂಸದೆ ಶೋಭಾ ಕರಂದ್ಲಾಜೆ ಕಾರು ಅಪಘಾತ : ಬೈಕ್ ಸವಾರ ಸಾವು

ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ, ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನವೀನ್‌ನನ್ನು ರಕ್ಷಿಸಿದ್ದಾರೆ. ಸದ್ಯ ನವೀನ್​ ಸಾವಿನ ದವಡೆಯಿಂದ ಪಾರಾಗಿ ನಿಟ್ಟುಸಿರು ಬಿಟ್ಟದ್ದಾನೆ.

RELATED ARTICLES

Related Articles

TRENDING ARTICLES