ಬೆಂಗಳೂರು : ಶೋಭಾ ಕರಂದ್ಲಾಜೆ ಕಾರಿಗೆ ದ್ವಿಚಕ್ರವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೆಆರ್ ಪುರ ನಿವಾಸಿ ಪ್ರಕಾಶ್ (35) ಸಾವಿಗೀಡಾದ (ಆ್ಯಕ್ಟೀವ್ ಹೋಂಡಾ) ಬೈಕ್ ಸವಾರ, ಕೆಆರ್ ಪುರದ ಗಣೇಶ ದೇವಸ್ಥಾನದ ಬಳಿ ನಿಂತಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರು ಡೋರ್ ತೆಗೆದು ನಿಂತಿತ್ತು ಈ ವೇಳೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಡ್ರಗ್ ಸಪ್ಲೈ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ
ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಕೂಡಲೆ ಕೆಆರ್ ಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೇ, ಚಿಕಿತ್ಸೆ ಫಲಕಾರಿಯಾಗದೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ.