Sunday, May 5, 2024

ಸಂಸದೆ ಶೋಭಾ ಕರಂದ್ಲಾಜೆ ಕಾರು ಅಪಘಾತ : ಬೈಕ್ ಸವಾರ ಸಾವು

ಬೆಂಗಳೂರು : ಶೋಭಾ ಕರಂದ್ಲಾಜೆ ಕಾರಿಗೆ ದ್ವಿಚಕ್ರವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರನಿಗೆ ಗಂಭೀರ ಗಾಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೆಆರ್​ ಪುರ ನಿವಾಸಿ ಪ್ರಕಾಶ್​ (35) ಸಾವಿಗೀಡಾದ (ಆ್ಯಕ್ಟೀವ್​ ಹೋಂಡಾ) ಬೈಕ್​ ಸವಾರ, ಕೆಆರ್​ ಪುರದ ಗಣೇಶ ದೇವಸ್ಥಾನದ ಬಳಿ ನಿಂತಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರು ಡೋರ್​ ತೆಗೆದು ನಿಂತಿತ್ತು ಈ ವೇಳೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಡ್ರಗ್​ ಸಪ್ಲೈ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ

ಘಟನೆಯಲ್ಲಿ ಬೈಕ್​ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಕೂಡಲೆ ಕೆಆರ್​ ಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೇ, ಚಿಕಿತ್ಸೆ ಫಲಕಾರಿಯಾಗದೇ ಬೈಕ್​ ಸವಾರ ಸಾವನ್ನಪ್ಪಿದ್ದಾನೆ.

RELATED ARTICLES

Related Articles

TRENDING ARTICLES