Thursday, May 9, 2024

ತುಮಕೂರಿನಲ್ಲಿ ಜೆಡಿಎಸ್ ಬಣಗಳ ನಡುವೆ ಮಾರಾಮಾರಿ

ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಚುನಾವಣೆ ಪ್ರಚಾರದ ವೇಳೆ ಜೆಡಿಎಸ್ ಬಣಗಳ ನಡುವೆಯೇ ಮಾರಾಮಾರಿ ನಡೆದಿದೆ.

ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ. ಸೋಮಣ್ಣ ಇಂದು ಪ್ರಚಾರ ನಡೆಸಿದರು. ಈ ವೇಳೆ ಘಟನೆ ಸಂಭವಿಸಿದೆ.

ಸೋಮಣ್ಣ ಪ್ರಚಾರ ನಡೆಸುತ್ತಿದ್ದಾಗ ಜೆಡಿಎಸ್ ಪ್ರಭಾವಿ ಮುಖಂಡ ರಾಕೇಶ್ ಗೌಡ ಸೇರಿದಂತೆ ಅನೇಕ ಮೂಲ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಗುಂಪು, ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ ಪ್ರಚಾರ ಸಭೆ ನಡೆಸಬಾರದು ಎಂದು ಅಪಸ್ವರ ಎತ್ತಿತು.

ಈ ವೇಳೆ ರಾಕೇಶ್ ಗೌಡ ಗುಂಪು ಹಾಗೂ ಕೆ.ಟಿ ಶಾಂತಕುಮಾರ್ ಗುಂಪುಗಳ ನಡುವೆ ನಡೆದ ಮಾತಿನ ಚಕಮಕಿ ನಡೆಯಿತು. ಇದು ಜಗಳಕ್ಕೆ ತಿರುಗಿ ಕೈ ಕೈ ಮಿಲಾಯಿಸುವ ಹಂತ ತಲುಪಿತು. ಈ ವೇಳೆ ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹಾಗೂ ಅಭ್ಯರ್ಥಿ ವಿ.ಸೋಮಣ್ಣ ಪರಿಸ್ಥಿತಿ ತಿಳಿಗೊಳಿಸುವ ಕೆಲಸಕ್ಕೆ ಮುಂದಾದರು.

ಸೋಮಣ್ಣನವರಿಗೆ ಮಗ್ಗಲ ಮುಳ್ಳು

ಕೆಲ ಕಾಲ ಬಿಗುವಿನ ವಾತಾವರಣ ಉಂಟಾಗಿ ಗೊಂದಲಕ್ಕೆ ಕಾರಣವಾಯಿತು. ಇನ್ನೂ, ಜೆಡಿಎಸ್ ಗುಂಪುಗಳ ನಡುವೆ ಬಣ ರಾಜಕೀಯ ಬೂದಿ ಮುಚ್ಚಿದ ಕೆಂಡದಂತ್ತಾಗಿದೆ. ಎರಡು ಬಣಗಳ ರಾಜಕೀಯ ಮೇಲಾಟಕ್ಕೆ ಮೈತ್ರಿ ಅಭ್ಯರ್ಥಿ ವಿ. ಸೋಮಣ್ಣನವರಿಗೆ ಮಗ್ಗಲ ಮುಳ್ಳುವಾಗಿದೆ.

RELATED ARTICLES

Related Articles

TRENDING ARTICLES