ಬೆಂಗಳೂರು: ತಮ್ಮ ವಿರುದ್ದ ಗೋ ಮಾಂಸ ತಿನ್ನುವ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಅವರಿಗೆ ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಅವರು ತಿರುಗೇಟು ನೀಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ನಾನು ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಮಾಂಸವನ್ನು ಸೇವಿಸುವುದಿಲ್ಲ. ನನ್ನ ಬಗ್ಗೆ ಸಂಪೂರ್ಣವಾಗಿ ಆಧಾರರಹಿತ ವದಂತಿಗಳನ್ನು ಹರಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದಾರೆ.
ನಾನು ದಶಕಗಳಿಂದ ಯೋಗ ಮತ್ತು ಆಯುರ್ವೇದ ಜೀವನ ವಿಧಾನವನ್ನು ಪ್ರತಿಪಾದಿಸುತ್ತಿದ್ದೇನೆ. ಜೊತೆಗೆ ಆ ಬಗ್ಗೆಯೇ ಸಾಮಾಜಿಕವಾಗಿ ಪ್ರಚಾರ ಮಾಡುತ್ತಿದ್ದೇನೆ. ಈಗ ಈ ರೀತಿಯ ಕುತಂತ್ರಗಳು ನನ್ನ ಕಳಂಕಕ್ಕೆ ಕಾರಣವಾಗುವುದಿಲ್ಲ ಎಂದು ಚಾಟಿ ಬಿಸಿದ್ದಾರೆ.
ನಾನು ಹೆಮ್ಮೆಯ ಹಿಂದೂ
ನನ್ನ ಜನರಿಗೆ ನನ್ನ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ನಾನು ಹೆಮ್ಮೆಯ ಹಿಂದೂ ಎಂದು ಅವರಿಗೆ ತಿಳಿದಿದೆ. ಇಂತಹ ಯಾವುದೆ ಹೇಳಿಕೆಗಳು ಜನರನ್ನ ದಾರಿ ತಪ್ಪಿಸುವುದಿಲ್ಲ. ಜೈ ಶ್ರೀ ರಾಮ್ ಎಂದು ಎಕ್ಸ್ ಖಾತೆಯಲ್ಲಿ ನಟಿ ಕಂಗನಾ ಪೋಸ್ಟ್ ಮಾಡಿದ್ದಾರೆ.
ಗೋಮಾಂಸ ಇಷ್ಟ ಅಂದಿದ್ದರು
ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಅವರು, ನಟಿ ಕಂಗನಾ ರಣಾವತ್ ಅವರು ನನಗೆ ಗೋಮಾಂಸ ಇಷ್ಟ ಅಂದಿದ್ದರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮಹಾರಾಷ್ಟ್ರದಲ್ಲಿ ಮಾತನಾಡಿದ ಅವರು, ತಾನು ಗೋಮಾಂಸವನ್ನು ಇಷ್ಟಪಡುತ್ತೇನೆ ಮತ್ತು ತಿನ್ನುತ್ತೇನೆ ಎಂದು ಎಕ್ಸ್ನಲ್ಲಿ ಬರೆದಿದ್ದ ರಣಾವತ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ಆರೋಪಿಸಿದ್ದರು.
I don’t consume beef or any other kind of red meat, it is shameful that completely baseless rumours are being spread about me, I have been advocating and promoting yogic and Ayurvedic way of life for decades now such tactics won’t work to tarnish my image. My people know me and…
— Kangana Ranaut (Modi Ka Parivar) (@KanganaTeam) April 8, 2024