ವಿಜಯಪುರ : ಎಲ್ಲೆಡೆ ಮುಸ್ಲಿಂ ಬಾಂಧವರು ಇಂದು ರಂಜಾನ್ ಹಬ್ಬವನ್ನು ಸಡಗರದಿಂದ ಆಚರಿಸಿದ್ದಾರೆ. ಈ ಸಂಭ್ರಮದ ನಡುವೆಯೇ ರಾಜ್ಯದಲ್ಲಿ ಭೀಕರ ಹತ್ಯೆ ನಡೆದಿದೆ.
ವಿಜಯಪುರ ನಗರದ ಜಾಮೀಯ ಮಸೀದಿ ಬಳಿ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೃತನನ್ನು ಪೇಟೆ ಬಾವಡಿ ನಿವಾಸಿ ರಜೀನ್ ಜಮಾದಾರ್ (27) ರಂದು ಗುರುತಿಸಲಾಗಿದೆ.
ಹಳೆ ವೈಷಮ್ಯವೇ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ. ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗೋಲಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸಿಡಿಲು ಬಡಿದು ಯುವಕ ಸಾವು
ಸಿಡಿಲು ಬಡಿದು ಜಮೀನಿನಲ್ಲಿ ಬಾಲಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಾವಿನಹಳ್ಳಿ ರಸ್ತೆಯ ಜಲದಪ್ಪನ ಕೆರೆಯ ಜಮೀನಿನಲ್ಲಿ ನಡೆದಿದೆ. ಭೀರಪ್ಪ ನಿಂಗಪ್ಪ ಅವರಾದಿ (16) ಮೃತಪಟ್ಟ ಬಾಲಕ. ಗುಡುಗು ಸಿಡಿಲು ಮಳೆಗೆ ಬಾಲಕ ಬಲಿಯಾಗಿದ್ದಾನೆ. ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಅವರು ಭೇಟಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ. ಮೃತ ಬಾಲಕನ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.