Thursday, May 2, 2024

ಅಕ್ಕಿ ವಿತರಣೆಯಲ್ಲಿ ಕೇಂದ್ರದಿಂದ ಮಲತಾಯಿ ಧೊರಣೆ: ಸಚಿವ ಕೆ.ಹೆಚ್​ ಮುನಿಯಪ್ಪ

ಮೈಸೂರು : ಕೇಂದ್ರ ಸರ್ಕಾರದ ಮಲತಾಯಿ ದೋರಣೆಯಿಂದಾಗಿ ನಮಗೆ ಅಕ್ಕಿಯನ್ನು ಕೊಡಲು ನಿರಾಕರಿಸಿತು ಆದರೂ ನಾವು ಜನರಿಗೆ ನೀಡಿದ ಮಾತಿನಂತೆ 5ಕೆಜಿ ಅಕ್ಕಿಗೆ ಬದಲು ಹಣವನ್ನು ನೇರ ನಗದು ವರ್ಗಾವಣೆ ಮಾಡುವ ಮೂಲಕ ಜನರಿಗೆ ತಲುಪಿಸುತ್ತಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪ ತಿಳಿಸಿದರು.

ಮೈಸೂರು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ದಲಿತ ಸಮಾಜದ ಮುಖಂಡರ ಸಮಾವೇಶವನ್ನು ಇಂದು ಮೈಸೂರಿನ ಸರಸ್ವತಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು  ಕಾರ್ಯಕ್ರಮವನ್ನು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ನವರು ಉದ್ಘಾಟಿಸಿದರು ಮಾತನಾಡಿದರು.  ‌

ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾವು ನೀಡಿದ್ದ ಎಲ್ಲಾ ‌5 ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ.

ಕೇಂದ್ರ ಸರ್ಕಾರದ ಮಲತಾಯಿ ದೋರಣೆಯಿಂದಾಗಿ ನಮಗೆ ಅಕ್ಕಿಯನ್ನು ಕೊಡಲು ನಿರಾಕರಿಸಿತು ಆದರೂ ನಾವು ಜನರಿಗೆ 5ಕೆಜಿ ಅಕ್ಕಿಗೆ ಹಣವನ್ನು ನೇರ ನಗದು ವರ್ಗಾವಣೆ ಮಾಡುವ ಮೂಲಕ ಜನರಿಗೆ ತಲುಪಿಸುತ್ತಿದ್ದೇವೆ. ಕೇಂದ್ರದಲ್ಲಿ 2013 ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ರವರ ನೇತೃತ್ವದಲ್ಲಿ ನ್ಯಾಷನಲ್ ಫುಡ್ ಸೆಕ್ಯುರಿಟಿ ಆಕ್ಟ್ ಅನ್ನು ಜಾರಿಗೆತಂದ ಹೆಮ್ಮೆ ನಮ್ಮ ಪಕ್ಷಕ್ಕಿದೆ ನಾವು ಸರ್ಕಾರದಲ್ಲಿದ್ದಾಗ ಯಾವ ರಾಜ್ಯಕ್ಕೂ ಬೇದ ಬಾವ ಮಾಡದೆ ಸರಿಸಮನಾಗಿ ಅನುಕೂಲಗಳನ್ನು ತಲುಪಿಸಿದ್ದೇವೆ‌. ಆದರೆ ಮೋದಿ ಸರ್ಕಾರ ನಮಗೆ ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡಿತು.

ಇದನ್ನೂ ಓದಿ: ಬಿಜೆಪಿ ಮುಖಂಡರು ನನ್ನನ್ನು ಉಚ್ಚಾಟನೆ ಮಾಡಲಿ ಎಂದು ಕಾಯುತ್ತಿದ್ದೇನೆ : ಕೆ.ಎಸ್​ ಈಶ್ವರಪ್ಪ

ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ರವರ ನೇತೃತ್ವದಲ್ಲಿ ಜನಸಾಮಾನ್ಯರಿಗೆ ಶಕ್ತಿ ಯನ್ನು ತುಂಬಲು 25 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ.

ನಮ್ಮ ಪಕ್ಷ ಯಾವುದೇ ಜಾತಿ ಧರ್ಮ ಬೇದವಿಲ್ಲದೆ ಎಲ್ಲಾ ವರ್ಗದವರಿಗೆ ಅವಕಾಶಗಳನ್ನು ಕಲ್ಲಿಸುತ್ತಿದ್ದೇವೆ. ಮೈಸೂರು ಮತ್ತು ಚಾಮರಾಜನಗರ ಎರಡು ಕ್ಷೇತ್ರದಲ್ಲಿ ಸುನಿಲ್ ಬೋಸ್ ಮತ್ತು ಎಂ.ಲಕ್ಷ್ಮಣ್ ರವರನ್ನು ತಾವು ಹೆಚ್ಚಿನ ಪ್ರಮಾಣದಲ್ಲಿ ಮತವನ್ನು ನೀಡಿ ಗೆಲ್ಲಿಸಿ ಕೊಡಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ ಎಂದರು.

ನಮ್ಮ ಸರ್ಕಾರ ನೀಡಿರುವ ಈ 5 ಗ್ಯಾರಂಟಿ ಯೋಜನೆಗಳು ಸುಮಾರು ನಾಲ್ಕು ಕೋಟಿಗೂ ಹೆಚ್ಚು ಜನರಿಗೆ ತಲುಪಿವೆ ನಮಗೆ ಆಶಾಭಾವನೆ ಇದೆ. ಈ ಬಾರಿ 28 ಕ್ಷೇತ್ರಗಳಲ್ಲಿಯೂ ನಮ್ಮ ಎಲ್ಲಾ ಅಭ್ಯರ್ಥಿಗಳು ಗೆಲುವನ್ನು ಸಾಧಿಸುತ್ತಾರೆ ಎಂದರು.

ಕೇಂದ್ರ ಸರ್ಕಾರ 10 ವರ್ಷಗಳ ಆಡಳಿತದಲ್ಲಿ ರೈತರ ಪರವಾಗಿ ಯಾವೊಂದು ಯೋಜನೆಯನ್ನು ನೀಡಲಿಲ್ಲಾ ಮತ್ತು ರೈತರ ಸಾಲಮನ್ನಾ ಮಾಡಲಿಲ್ಲಾ. ಜನಸಾಮಾನ್ಯರಿಗೆ ಇದೆಲ್ಲವುದರ ಅರಿವಿದೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವರಾದ ಹೆಚ್ ಸಿ.ಮಹದೇವಪ್ಪ, ಶಾಸಕ ತಿಮ್ಮಯ್ಯ, ಮಾಜಿ ಸಚಿವ ಶಿವಣ್ಣ, ಮಾಜಿ ಸಂಸದರಾದ ಶಿವಣ್ಣ, ಆಶ್ರಯ ಸಮಿತಿಯ ಅಧ್ಯಕ್ಷರಾದ ಯತೀಂದ್ರ ಸಿದ್ದರಾಮಯ್ಯ, ಧರ್ಮಸೇನಾ,ಜಿಲ್ಲಾ ಪಿಸಿಸಿ ಅಧ್ಯಕ್ಷರಾದ ವಿಜಯಕುಮಾರ್, ನಗರ ಪಿಸಿಸಿ ಅಧ್ಯಕ್ಷರಾದ ಮೂರ್ತಿ, ಬ್ಲಾಕ್ ಕಾಂಗ್ರೆಸ್ ಸದಸ್ಯರು, ದಲಿತ ಮುಖಂಡರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES