ಶಿರಸಿ: ತಾಲೂಕಿನ ಬನವಾಸಿಯಲ್ಲಿ ಸಚಿವ ಮಂಕಾಳು ವೈದ್ಯ ಸಮ್ಮುಖದಲ್ಲಿ ಇಂದು ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ.
ಇದೇ ವೇಳೆ ಅವರು ನೂರಾರು ಬೆಂಬಲಿಗರನ್ನು ಕಾಂಗ್ರೆಸ್ಗೆ ಸೇರ್ಪಡೆಗೊಳಿಸಲಿದ್ದಾರೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಗೆ ದೊಡ್ಢ ಶಾಕ್ ನೀಡಿದಂತಾಗಿದೆ. ವಿವೇಕ್ ಹೆಬ್ಬಾರ್ ಅವರ ಕಾಂಗ್ರೆಸ್ ಸೇರ್ಪಡೆ ತಾಲೂಕಿನಲ್ಲಿ ಚರ್ಚೆಯ ವಿಷಯವಾಗಿದೆ.
ಇದನ್ನೂ ಓದಿ : ಚುನಾವಣೆ ನಂತರ ಕಾಂಗ್ರೆಸ್ ಧೂಳಿಪಟ: ಬಿ.ವೈ ವಿಜಯೇಂದ್ರ
ಗುರವಾರ ಬನವಾಸಿಯಲ್ಲಿ ನಡೆಯುವ ಕಾರ್ಯಕ್ರಮ ಮುಗಿಸಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಪುತ್ರನ ಸೇರ್ಪಡೆ ಮೂಲಕ ಹೆಬ್ಬಾರ್ ಅವರ ಪಕ್ಷಾಂತರ ಬಹುತೇಕ ನಿಶ್ಚಿತ ಎನ್ನಲಾಗುತ್ತಿದೆ.