ರಾಮನಗರ : ಬೆಂಗಳೂರು – ಮೈಸೂರು ಹೆದ್ದಾರಿಯ ಹೆಜ್ಜಾಲ ಟೋಲ್ ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹತ್ತು ಕೋಟಿಗೂ ಹೆಚ್ಚಿನ ಮೌಲ್ಯದ 30 ಕೆ.ಜಿ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದು ರಾಮನಗರದ ಹೆಜ್ಜಾಲ ಟೋಲ್ ಬಳಿ ಚುನಾವಣಾ ಅಧಿಕಾರಿಗಳಿಂದ ವಾಹನ ತಪಾಸಣೆ ಕಾರ್ಯ ನಡೆಯುತ್ತಿದ್ದ ವೇಳೆ ಹತ್ತು ಕೋಟಿಗೂ ಹೆಚ್ಚಿನ ಮೌಲ್ಯದ 30 ಕೆಜಿ ತೂಕದ ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಮಾಜಿ ಪತ್ನಿಯಿಂದ ಮಾಜಿ ಪತಿಗೆ ಜೀವನಾಂಶ ನೀಡುವಂತೆ ಕೋರ್ಟ್ ಆದೇಶ
ಬೆಂಗಳೂರಿನಿಂದ ಮೈಸೂರಿನ ಕೆಲ ಚಿನ್ನಾಭರಣ ಮಳಿಗೆಗೆ ಚಿನ್ನ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಹೆಜ್ಜಾಲ ಟೋಲ್ ಬಳಿ ತಪಾಸಣೆಗೆ ನಡೆಸಿದ ಚುನಾವಣಾ ಅಧಿಕಾರಿಗಳಿಗೆ ಜಿಎಸ್ಟಿ ಬಿಲ್ ನಲ್ಲಿ ಲೋಪ ಕಂಡು ಬಂದಿದೆ. ಈ ಚಿನ್ನಾರಣವು ಖಾಸಗಿ ಕಂಪನಿಗೆ ಸೇರಿದ ಬಂಗಾರವಾಗಿದ್ದು ಸೂಕ್ತ ದಾಖಲೆಗಳು ಇಲ್ಲದ ಕಾರಣ ಪರಿಶೀಲನೆ ಬಿಡದಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಆದಾಯ ತೆರಿಗೆ ಅಧಿಕಾರಿಗಳ ಭೇಟಿ ನೀಡಿ ಮಹಿತಿ ಪಡೆಯಲಿದ್ದಾರೆ.