Thursday, May 2, 2024

ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ

ಬೀದರ್​ : ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸೆಗಿರುವ ಅಮಾನವೀಯ ಕೃತ್ಯ ಬೀದರ್​ನಲ್ಲಿ ನಡೆದಿದೆ.

ಬೀದರ್ ತಾಲೂಕಿನ ಚಾಂಬೋಳ ಗ್ರಾಮದ ಸರ್ಕಾರಿ ಆಸ್ಪತ್ರೆಯ ಬಳಿ ಈ ಘಟನೆ ನಡೆದಿದೆ. ಮೂರು ಮಕ್ಕಳು ಇರುವ ವಿವಾಹಿತ ಮಹಿಳೆ ಮೇಲೆ ಯುವಕ ಈ ರೀತಿ ಅಮಾನವೀಯ ಕೃತ್ಯ ಎಸಗಿದ್ದಾನೆ.

ಸಂತ್ರಸ್ತ ಮಹಿಳೆ ಗ್ರಾಮದ ಸರ್ಕಾರಿ ಆಸ್ಪತ್ರೆ ಹಿಂಭಾಗದಲ್ಲಿ ಬಹಿರ್ದೆಸೆಗೆ ತೆರಳಿದ್ದಳು. ಇದನ್ನು ಕಂಡ ದುಷ್ಕರ್ಮಿ ಅಲ್ಲಿಗೆ ತೆರಳಿದ್ದಾನೆ. ಈ ವೇಳೆ ಬಲವಂತವಾಗಿ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾನೆ. ಬಳಿಕ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆ ಬಳಿಕ ಸಂತ್ರಸ್ತ ಮಹಿಳೆಯನ್ನು ಬೀದರ್​ನ ಬ್ರಿಮ್ಸ್​ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಈ ಸಂಬಂಧ ಜನವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

30 ಕೆಜಿ ಚಿನ್ನಾಭರಣ ವಶ

ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆ ಹತ್ತು ಕೋಟಿಗೂ ಹೆಚ್ಚು ಮೌಲ್ಯದ 30 ಕೆಜಿ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯ ಹೆಜ್ಜಾಲ‌ ಟೋಲ್ ಬಳಿ ಇರುವ ಚುನಾವಣಾ ಚೆಕ್ ಪೋಸ್ಟ್​​ನಲ್ಲಿ ಸೀಜ್ ಮಾಡಲಾಗಿದೆ. ಚುನಾವಣಾ ಅಧಿಕಾರಿಗಳು ವಾಹನ ತಪಾಸಣೆ ನಡೆಸಿ ಕೋಟ್ಯಾಂತರ ಬೆಲೆ ಬಾಳುವ ಬಂಗಾರ ಜಪ್ತಿ ಮಾಡಿದ್ದಾರೆ. ಬಿಡದಿ ಪೊಲೀಸರು ಸೂಕ್ತ‌ ದಾಖಲೆ‌ ಇಲ್ಲದ ಕಾರಣ ಪರಿಶೀಲನೆ ಮಾಡುತ್ತಿದ್ದಾರೆ.

RELATED ARTICLES

Related Articles

TRENDING ARTICLES