Saturday, May 11, 2024

ಸಿಡಿಲು ಬಡಿದು ಯುವ ರೈತ ಸಾವು

ಯಾದಗಿರಿ : ಸಿಡಿಲು ಬಡಿದು ಯುವ ರೈತನೊರ್ವ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ.

ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಮರದ ಕೆಳಗೆ ನಿಂತಿದ್ದ ಮಂಜುನಾಥ (22) ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೂ ಇದೇ ವೇಳೆ ಪಕ್ಕದಲ್ಲೇ ಓರ್ವ ಯುವಕನಿಗೆ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಗಿದ್ದಾನೆ. ಗಾಯಾಳು ಯುವಕನನ್ನ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಂಭಾವಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ತಂತಿ ತಗುಲಿ ರೈತ ಸಾವು

ವಿದ್ಯುತ್ ತಂತಿ ತಗುಲಿ ರೈತ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋಡಿಹಾಳ ಗ್ರಾಮದಲ್ಲಿ ನಡೆದಿದೆ. ಹೊರಟೂರು ಗ್ರಾಮದ ರೈತ ಮರೇಪ್ಪ (43) ಮೃತ ದುರ್ದೈವಿ. ಜಾನುವಾರುಗಳಿಗೆ ಮೇವು ತೆಗೆದುಕೊಂಡು ಬರುವಾಗ ಹೊಲದಲ್ಲಿದ್ದ ವಿದ್ಯುತ್ ತಂತಿ ತಗುಲಿ ರೈತ ಮರೇಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ವಡಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿಯಲ್ಲಿ ಗುಡುಗು ಸಹಿತ ಮಳೆ

ಬಿಸಿಲಿಗೆ ಹೈರಾಣಾಗಿರುವ ಬಳ್ಳಾರಿಗೆ ವರುಣನ ಆಗಮನವಾಗಿದೆ. ಬಳ್ಳಾರಿ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಬಿಸಿಲಿನ ಬೇಗೆಗೆ ತತ್ತರಿಸಿದ ಜನತೆ ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಮುಂದಿನ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

RELATED ARTICLES

Related Articles

TRENDING ARTICLES