ತುಮಕೂರು : ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ತುಮಕೂರಿನ ತುರುವೇಕೆರೆಯಲ್ಲಿ ಎನ್ಡಿಎ ಅಭ್ಯರ್ಥಿ ವಿ.ಸೋಮಣ್ಣ ಪರ ಕುಮಾರಸ್ವಾಮಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಭಾಷಣದಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಲಘುವಾಗಿ ಹೇಳಿಕೆ ನೀಡಿದ್ದಾರೆ.
ಉಚಿತ ಗ್ಯಾರಂಟಿ ಯೋಜನೆ ಕೊಡಲು ಯಾವ ಜೇಬಿಗೆ ಕೈ ಹಾಕಿದ್ದಾರೆ ಎಂದು ಹೇಳುತ್ತಾ ಈ ರೀತಿ ಎಡವಟ್ಟು ಮಾಡಿಕೊಂಡಿದ್ದಾರೆ. ಗಮನ ಇಟ್ಟು ಎರಡು ಮಾತುಗಳನ್ನ ಕೇಳಬೇಕು. ಇವತ್ತಿನ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಈ ರೀತಿ ಉಚಿತ ಯೋಜನೆ ಕೊಟ್ಟರೆ ಹಳ್ಳಿಯ ತಾಯಂದಿರ ಬದುಕು ಏನಾಗಬೇಕು? ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕಿದೆ. ನಿಮ್ಮ ಕುಟುಂಬದ ಬದುಕೇನಾಗಬೇಕು ಯೋಚನೆ ಮಾಡಬೇಕಿದೆ. ಅವರಿಗೆ ಐದು ಉಚಿತ ಗ್ಯಾರಂಟಿ ಬಿಟ್ಟು ಬೇರೆ ಏನೂ ಇಲ್ಲ ಎನ್ನುತ್ತಲೇ ಗ್ಯಾರಂಟಿಗಳನ್ನು ಕುಮಾರಸ್ವಾಮಿ ಟೀಕಿಸಿದ್ದಾರೆ.
ತುಮಕೂರು ಲೋಕಸಭೆ ಕ್ಷೇತ್ರದ ನೊಣವಿನಕೆರೆಯಲ್ಲಿ @JanataDal_S, @BJP4Karnataka ಮೈತ್ರಿಕೂಟದ ಅಭ್ಯರ್ಥಿಯಾದ ಶ್ರೀ ವಿ.ಸೋಮಣ್ಣ ಅವರ ಪರ ಚುನಾವಣಾ ಪ್ರಚಾರ ನಡೆಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra, ಸಂಸದರಾದ ಶ್ರೀ ಜಗ್ಗೇಶ್, ಮಾಜಿ ಸಚಿವರಾದ ಶ್ರೀ ನಾಗೇಶ್, ಮಾಜಿ ಶಾಸಕರಾದ ಶ್ರೀ ಲಕ್ಷ್ಮೀನಾರಾಯಣ, ನಮ್ಮ ಪಕ್ಷದ… pic.twitter.com/6l9qOxTb6t— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 13, 2024