ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಪಕ್ಷದ ಪ್ರಣಾಳಿಕೆಯನ್ನು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ದಿನವಾದ ಇಂದು ಬಿಡುಗಡೆ ಮಾಡಿದ್ದು, ಮಹಿಳೆಯರು, ರೈತರು, ಬಡವರು ಹಾಗೂ ಯುವಕರ ಏಳಿಗೆಯ ಜತೆಗೆ 14 ಭರವಸೆಗಳನ್ನು ನೀಡಿದೆ. ತನ್ನ ಪುಣಾಳಿಕೆಯನ್ನು ಮೋದಿಯ ಗ್ಯಾರಂಟಿ ಎಂದು ಬಿಜೆಪಿ ಕರೆದಿದೆ.
ಇದನ್ನೂ ಓದಿ: ಇಂದು ಮೈಸೂರು, ಮಂಗಳೂರಿನಲ್ಲಿ ಮೋದಿ ಹವಾ
ಈಗಾಗಲೇ ಮೋದಿ ಪ್ರಣಾಳಿಕೆ ಬಿಡುಗಡೆಮಾಡಿದ್ದು ಈ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು ಹೀಗಿವೆ.
1. ಒಂದು ರಾಷ್ಟ್ರ, ಒಂದು ಚುನಾವಣೆ ಮತ್ತು ಸಾಮಾನ್ಯ ಮತದಾರರ ಪಟ್ಟಿಯನ್ನು ತರಲಾಗುವುದು
2. ಬಡವರಿಗೆ ಉಚಿತ ಪಡಿತರ, ನೀರು ಮತ್ತು ಗ್ಯಾಸ್ ಸಂಪರ್ಕ ಕಲ್ಪಿಸಲಾಗುವುದು
3. ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ತರಲಾಗುವುದು
4. ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಯಡಿ ಶೂನ್ಯ ವಿದ್ಯುತ್ ಬಿಲ್
5. ಲತಿ ದೀದಿ ಮಾಡುವ ಗುರಿ
6. ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಮತ್ತು ಆಸ್ಟಿಯೊಪೊರೋಸಿಸ್ ಬಗ್ಗೆ ವಿಶೇಷ ಗಮನ
7. ವಂದೇ ಭಾರತ್ ರೈಲು ಜಾಲದ ವಿಸ್ತರಣೆ, ಕಾಯುವ ಪಟ್ಟಿಯ ಸಮಸ್ಯೆಯನ್ನು ತೆಗೆದುಹಾಕಲು
8. ಅಮೃತ್ ಭಾರತ್ ಮತ್ತು ನಮೋ ಭಾರತ್ ರೈಲುಗಳು ಬರಲಿವೆ
9. ಹೊಸ ವಿಮಾನ ನಿಲ್ದಾಣ, ಹೆದ್ದಾರಿಗಳು, ಮೆಟ್ರೋ ಮತ್ತು ನೀರಿನ ಮೆಟ್ರೋಗಳು ಬರಲಿವೆ
10. ಇ-ಶ್ರಮ್ ಮೂಲಕ ಕಲ್ಯಾಣ ಯೋಜನೆಯಿಂದ ಪ್ರಯೋಜನ ಪಡೆಯುವುದು
12. ಹೆದ್ದಾರಿಗಳಲ್ಲಿ ಟ್ರಕ್ ಚಾಲಕರಿಗೆ ಆಧುನಿಕ ಸೌಲಭ್ಯಗಳು
13. ವಿಶ್ವಾದ್ಯಂತ ರಾಮಾಯಣ ಉತ್ಸವ ಆಚರಿಸಲಾಗುವುದು
14. ಅಯೋಧ್ಯೆಯಲ್ಲಿ ಸೌಲಭ್ಯಗಳ ವಿಸ್ತರಣೆ
15. 2036 ರಲ್ಲಿ ಒಲಿಂಪಿಕ್ಸ್ ಆತಿಥ್ಯ
ಪ್ರಣಾಳಿಕೆ ಬಿಡುಗಡೆ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಷಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೇಂದ್ರದ ಯೋಜನೆಗಳ ಫಲಾನುಭವಿಗಳಿಗೆ ಪ್ರಧಾನಿ ಮೋದಿ ಪ್ರಣಾಳಿಕೆಯನ್ನು ನೀಡಿದರು. ರೈತನಿಗೆ ಮೊದಲ ಪುಣಾಳಿಕೆ ಪುಸ್ತಕವನ್ನು ನೀಡಲಾಯಿತು.