ಮೈಸೂರು : ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ಅಡ್ರೆಸ್ಗೆ ಇರಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಹೇಳಿದರು.
ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುತ್ತೇವೆ ಎಂಬ ಸಂಕಲ್ಪ ಮಾಡಿದ್ದೇವೆ ಎಂದರು.
ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ಮುನ್ನೆಡೆಯುತ್ತಿದ್ದೇವೆ. ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಒಗ್ಗಟ್ಟಾಗಿದ್ದೇವೆ. ಹಾಲು ಜೇನಿನಂತೆ ಕೆಲಸ ಮಾಡುತ್ತೇವೆ. ಜೆಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆಯನ್ನ ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಹಣದ ಬಲದಿಂದ ಗೆಲ್ಲಲು ಆಗಲ್ಲ
ಕಾಂಗ್ರೆಸ್ ನಾಯಕರು ಹಣದ ಬಲ, ಜಾತಿ ವಿಷ ಬೀಜ, ಹೆಂಡದ ಬಲದಿಂದ ಗೆಲ್ಲುತ್ತೇವೆ ಅಂದುಕೊಂಡಿದ್ದಾರೆ. ಅವರಿಗೆ ಲೋಕಸಭಾ ಚುನಾವಣಾ ಫಲಿತಾಂಶದ ನಂತರ ನೀವೆಲ್ಲಿರುತ್ತೀರಾ ಅನ್ನೊದಕ್ಕೆ ಅಡ್ರೆಸ್ ಇರಲ್ಲ. ಅದನ್ನು ನೀವು ನೋಡುತ್ತಿರಾ ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ಅಭ್ಯರ್ಥಿಗಳು ಹಾಗೂ ಮೈತ್ರಿ ನಾಯಕರು ಉಪಸ್ಥಿತರಿದ್ದರು.