Tuesday, May 7, 2024

ಟಾಸ್ ಗೆದ್ದ KKR ಬೌಲಿಂಗ್ ಆಯ್ಕೆ : ಕೊಲ್ಕತ್ತಾ ಗೆಲುವಿನ ಓಟಕ್ಕೆ ಬ್ರೇಕ್ ಹಾಕ್ತಾರಾ ರಾಹುಲ್?

ಬೆಂಗಳೂರು : ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ದ ಟಾಸ್ ಗೆದ್ದಿರುವ ಕೊಲ್ಕತ್ತಾ ನೈಟ್‌ರೈಡರ್ಸ್‌ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಕೊಲ್ಕತ್ತಾದ ಈಡನ್‌ ಗಾರ್ಡನ್‌ ಸ್ಟೇಡಿಯಂನಲ್ಲಿ ಐಪಿಎಲ್​ನ 28ನೇ ಪಂದ್ಯ ನಡೆಯುತ್ತಿದೆ. ಕಳೆದ ಪಂದ್ಯದಲ್ಲಿ ಎರಡೂ ಪಂದ್ಯಗಳು ಸೋತಿವೆ. ಇಂದಿನ ಪಂದ್ಯ ಗೆದ್ದು ಗೆಲುವಿನ ಹಳಿಗೆ ಮರಳಲು ಉಭಯ ತಂಡಗಳು ರಣತಂತ್ರ ರೂಪಿಸಿವೆ.

ಪ್ರಸಕ್ತ ಟೂರ್ನಿಯಲ್ಲಿ ಕೊಲ್ಕತ್ತಾ ನೈಟ್‌ರೈಡರ್ಸ್‌ ಆಡಿರುವ 4 ಪಂದ್ಯಗಳಲ್ಲಿ 3 ಪಂದ್ಯ ಗೆದ್ದು, ಚೆನ್ನೈ ವಿರುದ್ಧ ಸೋತಿದೆ. 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಲಕ್ನೋ ಸೂಪರ್‌ ಜೈಂಟ್ಸ್‌ ಆಡಿರುವ 5 ಪಂದ್ಯಗಳಲ್ಲಿ 3 ಗೆಲುವು, 2 ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

ಲಕ್ನೋ ಸೂಪರ್‌ ಜೈಂಟ್ಸ್‌

ಕೆ.ಎಲ್. ರಾಹುಲ್ (ನಾಯಕ/ವಿಕೆಟ್ ಕೀಪರ್), ದೀಪಕ್ ಹೂಡಾ, ಆಯುಷ್ ಬದೋನಿ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಶಮರ್ ಜೋಸೆಫ್, ಯಶ್ ಠಾಕೂರ್

ಕೊಲ್ಕತಾ ನೈಟ್ ರೈಡರ್ಸ್‌

ಶ್ರೇಯಸ್ ಅಯ್ಯರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ರಘುವಂಶಿ, ಆಂಡ್ರೆ ರಸೆಲ್, ರಮಣ್‌ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ

RELATED ARTICLES

Related Articles

TRENDING ARTICLES