ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು ಮೈಸೂರು ಮತ್ತು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಹಾಲಿ ಪ್ರಧಾನಿ ಮೋದಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲೋಕಸಭೆ ಚುನಾವಣೆ ಘೋಷಣೆ ಆದ ಬಳಿಕ 3ನೇ ಬಾರಿ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವುದು. ಪ್ರಧಾನಿ ಮೋದಿಯವರ ಅಧಿಕೃತ ಚೊಚ್ಚಲ ರೋಡ್ ಶೋಗೆ ಮಂಗಳೂರು ನಗರ ಮದುವಣಗಿತ್ತಿಯಂತೆ ಸಿದ್ಧಗೊಂಡಿದೆ.
ಇದನ್ನೂ ಓದಿ: ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ
ರೋಡ್ ಶೋ ನಡೆಯಲಿರುವ ಲೇಡಿಹಿಲ್ನ ಶ್ರೀ ನಾರಾಯಣ ಗುರು ವೃತ್ತದಿಂದ ನವಭಾರತ ವೃತ್ತದ ವರೆಗೆ ಬಿಜೆಪಿ ಬಾವುಟ, ಬಂಟಿಂಗ್ಗಳು ರಾರಾಜಿಸುತ್ತಿವೆ. ರಸ್ತೆಯುದ್ದಕ್ಕೂ ಬ್ಯಾರಿಕೇಡ್ಗಳನ್ನು ಅಳವಡಿಸಿ ಸುವ್ಯವಸ್ಥೆ, ಬಿಗಿ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ. ರೋಡ್ ಶೋ ರಾತ್ರಿ ನಡೆಯಲಿರುವುದರಿಂದ ಅಗತ್ಯ ಬೆಳಕಿನ ವ್ಯವಸ್ಥೆ ಮಾಡಲಾಗಿದೆ.