ಬೆಂಗಳೂರು : ಸ್ಯಾಂಡಲ್ವುಡ್ ನಿರ್ಮಾಪಕ, ಸೌಂದರ್ಯ ಜಗದೀಶ್ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾಲಕ್ಷ್ಮಿ ಲೇಔಟ್ನ ನಿವಾಸದಲ್ಲಿ ಸೂಸೈಡ್ ಮಾಡಿಕೊಂಡಿದ್ದು ಸುಗುಣ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ.
ಸದ್ಯ ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಯಾಂಡಲ್ವುಡ್ನ ಅಪ್ಪು ಪಪ್ಪು, ಮಸ್ತ್ ಮಜಾ ಮಾಡಿ, ರಾಮಲೀಲ, ಸ್ನೇಹಿತರು ಸಿನಿಮಾಗಳ ನಿರ್ಮಾಣ ಮಾಡಿದ್ದರು. ಅಷ್ಟೆ ಅಲ್ಲದೇ ಇವರ ಪುತ್ರ ಸ್ನೇಹಿತ್ ಕೂಡ ಅಪ್ಪು ಪಪ್ಪು ಚಿತ್ರದಲ್ಲಿ ನಟನೆ ಮಾಡಿದ್ದರು.
ಬೆಂಗಳೂರಿನ ಪ್ರತಿಷ್ಟಿತ ಜೆಟ್ಲಾಗ್ ಬಾರ್ ನ ಮಾಲೀಕರು ಆಗಿರುವ ಇವರು, ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಇತ್ತೀಚೆಗೆ ಬ್ಯಾಂಕ್ನವರು ಮನೆ ಜಪ್ತಿ ಮಾಡಿದ್ದರು ಎನ್ನಲಾಗಿದೆ. ಇದರಿಂದಾಗಿ ಕೆಲದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ಸೌಂದರ್ಯ ಜಗದೀಶ್ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿದೆ.