Wednesday, May 8, 2024

ಸ್ಯಾಂಡಲ್​ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ

ಬೆಂಗಳೂರು : ಸ್ಯಾಂಡಲ್​ವುಡ್​ ನಿರ್ಮಾಪಕ, ಸೌಂದರ್ಯ ಜಗದೀಶ್​ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾಲಕ್ಷ್ಮಿ ಲೇಔಟ್​ನ ನಿವಾಸದಲ್ಲಿ ಸೂಸೈಡ್​ ಮಾಡಿಕೊಂಡಿದ್ದು ಸುಗುಣ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ.

ಸದ್ಯ ನಿರ್ಮಾಪಕ ಸೌಂದರ್ಯ ಜಗದೀಶ್​ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಯಾಂಡಲ್​ವುಡ್​ನ ಅಪ್ಪು ಪಪ್ಪು, ಮಸ್ತ್​ ಮಜಾ ಮಾಡಿ, ರಾಮಲೀಲ, ಸ್ನೇಹಿತರು ಸಿನಿಮಾಗಳ ನಿರ್ಮಾಣ ಮಾಡಿದ್ದರು. ಅಷ್ಟೆ ಅಲ್ಲದೇ ಇವರ ಪುತ್ರ ಸ್ನೇಹಿತ್​ ಕೂಡ ಅಪ್ಪು ಪಪ್ಪು ಚಿತ್ರದಲ್ಲಿ ನಟನೆ ಮಾಡಿದ್ದರು.

ಬೆಂಗಳೂರಿನ ಪ್ರತಿಷ್ಟಿತ ಜೆಟ್​ಲಾಗ್​ ಬಾರ್​ ನ ಮಾಲೀಕರು ಆಗಿರುವ ಇವರು, ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಇತ್ತೀಚೆಗೆ ಬ್ಯಾಂಕ್​ನವರು ಮನೆ ಜಪ್ತಿ ಮಾಡಿದ್ದರು ಎನ್ನಲಾಗಿದೆ. ಇದರಿಂದಾಗಿ ಕೆಲದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ಸೌಂದರ್ಯ ಜಗದೀಶ್​ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿದೆ.

RELATED ARTICLES

Related Articles

TRENDING ARTICLES