ಬಾಗಲಕೋಟೆ : ರಾಜ್ಯಕ್ಕೆ ಇಂದು ಕರಾಳ ಭಾನುವಾರ! ಒಂದೇ ಕುಟುಂಬದ ಐವರನ್ನು ಜವರಾಯ ಬಲಿ ಪಡೆದಿದ್ದಾನೆ. ವಿಧಿಯಾಟಕ್ಕೆ ಬಡ ಜೀವಗಳು ಮಸಣ ಸೇರಿವೆ.
ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದಾರುಣ ಘಟನೆ ಬಾಗಲಕೋಟೆಯ ಬೀಳಗಿ ತಾಲೂಕಿನ ಬಾದರದಿನ್ನಿ ಬಳಿಯ ಹೊನ್ಯಾಳ ಕ್ರಾಸ್ ಬಳಿ ನಡೆದಿದೆ.
ಬಾದರದಿನ್ನಿ ಗ್ರಾಮದ ವೆಂಕಪ್ಪ ತೋಳಮಟ್ಟಿ (70), ಪತ್ನಿ ಯಲ್ಲವ್ವ (60), ಮಗ ಪುಂಡಲಿಕ (35), ಪುತ್ರಿ ನಾಗವ್ವ (40) ಅಳಿಯ ಅಶೋಕ್ (45) ಮೃತ ದುರ್ದೈವಿಗಳು. ಹೊಲದ ಕೆಲಸ ಮುಗಿಸಿ ರಸ್ತೆ ಪಕ್ಕ ನಿಂತಿದ್ದವರ ಮೇಲೆ ಟಿಪ್ಪರ್ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ.
ಟಿಪ್ಪರ್ ಲಾರಿಯ ಟೈರ್ ಬ್ಲಾಸ್ಟ್ ಆಗಿ ರಸ್ತೆ ಪಕ್ಕ ನಿಂತಿದ್ದ ಒಂದೇ ಕುಟುಂಬದ ಐವರ ಮೇಲೆ ಬಿದ್ದಿದೆ. ಮಾಹಿತಿ ತಿಳಿದ ಕೂಡಲೇ ಬೀಳಗಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಘಟನಾ ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಅಮರನಾಥ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಸ್ನಲ್ಲಿ ವ್ಯಕ್ತಿಗೆ ಹೃದಯಾಘಾತ
ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಕಮಲಾಪುರ ಬಳಿ ನಡೆದಿದೆ. ವಿಜಯಕುಮಾರ್ ಶಿವಶರಣಪ್ಪ ನಾಗನಳ್ಳಿ (45) ಮೃತ ವ್ಯಕ್ತಿ. ಈತ ಬಿದ್ದಾಪುರ ಕಾಲೋನಿಯ ನಿವಾಸಿ. ಕಲಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿಯ ಬಳಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.