ಆನೇಕಲ್ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.90 ಕೋಟಿ ರೂ. ಹಣ ವನ್ನು ನಗರದ ಬೊಮ್ಮಸಂದ್ರದ ಬಳಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದು ಚುನಾವಣಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಕಾನೂನು ಬಾಹಿರವಾಗಿ ಹಣ, ಹೆಂಡ ಸೇರಿದಂತೆ ವಸ್ತುಗಳ ಸಾಗಾಟದ ಮೇಲೆ ಹದ್ದಿನ ಕಣ್ಣಿರಿಸಿದ್ದರೂ ಬೆಂಗಳೂರಿನ ಬೊಮ್ಮಸಂದ್ರ ಇಂಡಸ್ಟ್ರಿಯಲ್ ಏರಿಯಾ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.90 ಕೋಟಿ ರೂ. ಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಮಾಜಿ ಸಿಎಂ ಕುಮಾರಸ್ವಾಮಿಗೆ ಜೈಲು ಶಿಕ್ಷೆಯ ಚಾಟಿ ಬೀಸಿದ ಮಹಿಳಾ ಆಯೋಗ!
ಸಿ.ಎಂ.ಎಸ್ ಏಜೆನ್ಸಿ ವತಿಯಿಂದ 2.90ಕೋಟಿ ಹಣ ಸಾಗಿಸಲಾಗುತ್ತಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಹಣ ಸಾಗಿಸುತ್ತಿದ್ದ ವಾಹನ ಸಮೇತ ಚಾಲಕನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಘಟನೆಯೂ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.