ಹಾಸನ :ಕಾಂಗ್ರೆಸ್ ಪಕ್ಷದ ಪಾಪದ ಕೂಸು Article 370 ಆಗಿತ್ತು. ಇದರಿಂದ ಸಾವಿರಾರು ಯೋಧರ ಹತ್ಯೆ ಆಗಿತ್ತು. ಈಗ ಅದನ್ನು ಕಿತ್ತಾಗಿ ಶಾಂತಿ ಸ್ಥಾಪನೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕುಟುಕಿದರು.
ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ವಿಯಜೇಂದ್ರ ರೋಡ್ ಶೋನ ನಡೆಸಿ, ಮತಯಾಚನೆ ಮಾಡಿದರು.
ಈ ವೇಳೆ ಮಾತನಾಡಿ, ರಾಜ್ಯದಲ್ಲಿ ಬಂದಿರುವ ಸರ್ಕಾರ 18 ರಿಂದ 20 ಸ್ಥಾನ ಗೆಲ್ಲುವ ಭ್ರಮೆಯಲ್ಲಿದೆ. ಹಾಸನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲಿದೆ. ಅಧಿಕಾರ ದರ್ಪದ ಕಾಂಗ್ರೆಸ್ಗೆ ನಾವು ಉತ್ತರ ಕೊಡಬೇಕಿದೆ ಎಂದು ಹೇಳಿದರು.
ಇಡೀ ವಿಶ್ವ ನರೇಂದ್ರ ಮೋದಿಯವರ ನಾಯಕತ್ವವನ್ನು ಕೊಂಡಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಕೇಂದ್ರದಿಂದ ಅನುದಾನ ಬಂದಿಲ್ಲ ಅಂತಾರೆ. ಕಳೆದ 10 ವರ್ಷದಲ್ಲಿ 4.85 ಲಕ್ಷ ಕೋಟಿಗೂ ಅತ್ಯಧಿಕ ಹಣ ಬಂದಿದೆ. ಈ ಸರ್ಕಾರ ಬಂದಮೇಲೆ ಒಂದೇ ಒಂದು ಅಭಿವೃದ್ಧಿ ಕೆಲಸ ಆಗ್ತಾ ಇಲ್ಲ. ಮುಂದಿನ ಎರಡು ಮೂರು ತಿಂಗಳು ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗದ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅಲ್ಪಸಂಖ್ಯಾತರ ಹಿಂದೆ ಹೊರಟಿದ್ದಾರೆ
ಇಂಥ ದುಷ್ಟ ಸರ್ಕಾರ ಹಿಂದೆಂದೂ ಬಂದಿರಲಿಲ್ಲ. ನಮ್ಮ ಹಿಂದೂಗಳು ಮೆರವಣಿಗೆ ಮಾಡೋಕೆ ಹೋದ್ರೆ ಇವರು ಅಡ್ಡಿ ಮಾಡ್ತಾರೆ. ಸಿದ್ದರಾಮಯ್ಯ ಕೇವಲ ಅಲ್ಪಸಂಖ್ಯಾತರ ಹಿಂದೆ ಹೊರಟಿದ್ದಾರೆ. ಇವರಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಿದೆ. ಗ್ಯಾರಂಟಿ ಭ್ರಮೆಯಲ್ಲಿ ಇರೋರಿಗೆ ಕೇಂದ್ರದ ಯೋಜನೆ ಬಗ್ಗೆ ವಿವರಿಸಬೇಕಿದೆ. ಪ್ರಜ್ವಲ್ ರೇವಣ್ಣರನ್ನು ಹೆಚ್ಚಿನ ಲೀಡ್ನಲ್ಲಿ ಗೆಲ್ಲಿಸಿ ಎಂದು ವಿಜಯೇಂದ್ರ ಮನವಿ ಮಾಡಿದರು.
“ಮತ್ತೊಮ್ಮೆ ಮೋದಿ ಸರ್ಕಾರ
ವಿಕಸಿತ ಭಾರತಕ್ಕೆ ಸಾಕಾರ”ಹಾಸನ ಲೋಕಸಭಾ ಕ್ಷೇತ್ರದ ಸಕಲೇಶಪುರದಲ್ಲಿ ಜೆಡಿಎಸ್ (ಎನ್.ಡಿ.ಎ) ಅಭ್ಯರ್ಥಿ ಶ್ರೀ @iPrajwalRevanna ಅವರ ಪರ ಬೃಹತ್ ರೋಡ್ ಶೋ ಮೂಲಕ ಮತ ಯಾಚಿಸಲಾಯಿತು. ಅಭಿವೃದ್ಧಿಯಲ್ಲಿ ದೇಶವನ್ನು ವಿಶ್ವದಲ್ಲೇ ನಂ1 ಸ್ಥಾನಕ್ಕೆ ಕೊಂಡೊಯ್ಯುತ್ತಿರುವ ಮೋದಿಜೀ ಅವರು ಜನಸಾಮಾನ್ಯರ… pic.twitter.com/PZubHEF9O9
— Vijayendra Yediyurappa (Modi Ka Parivar) (@BYVijayendra) April 15, 2024