Wednesday, May 22, 2024

ಕಾಂಗ್ರೆಸ್ ಪಕ್ಷದ ಪಾಪದ ಕೂಸು Article 370 ಆಗಿತ್ತು : ವಿಜಯೇಂದ್ರ

ಹಾಸನ :ಕಾಂಗ್ರೆಸ್ ಪಕ್ಷದ ಪಾಪದ ಕೂಸು Article 370 ಆಗಿತ್ತು. ಇದರಿಂದ ಸಾವಿರಾರು ಯೋಧರ ಹತ್ಯೆ ಆಗಿತ್ತು. ಈಗ ಅದನ್ನು ಕಿತ್ತಾಗಿ ಶಾಂತಿ ಸ್ಥಾಪನೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕುಟುಕಿದರು.

ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ವಿಯಜೇಂದ್ರ ರೋಡ್ ಶೋನ ನಡೆಸಿ, ಮತಯಾಚನೆ ಮಾಡಿದರು.

ಈ ವೇಳೆ ಮಾತನಾಡಿ, ರಾಜ್ಯದಲ್ಲಿ ಬಂದಿರುವ ಸರ್ಕಾರ 18 ರಿಂದ 20 ಸ್ಥಾನ ಗೆಲ್ಲುವ ಭ್ರಮೆಯಲ್ಲಿದೆ. ಹಾಸನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲಿದೆ. ಅಧಿಕಾರ ದರ್ಪದ ಕಾಂಗ್ರೆಸ್​ಗೆ ನಾವು ಉತ್ತರ ಕೊಡಬೇಕಿದೆ ಎಂದು ಹೇಳಿದರು.

ಇಡೀ ವಿಶ್ವ ನರೇಂದ್ರ ಮೋದಿಯವರ ನಾಯಕತ್ವವನ್ನು ಕೊಂಡಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಕೇಂದ್ರದಿಂದ ಅನುದಾನ ಬಂದಿಲ್ಲ ಅಂತಾರೆ. ಕಳೆದ 10 ವರ್ಷದಲ್ಲಿ 4.85 ಲಕ್ಷ ಕೋಟಿಗೂ ಅತ್ಯಧಿಕ ಹಣ ಬಂದಿದೆ. ಈ ಸರ್ಕಾರ ಬಂದಮೇಲೆ ಒಂದೇ ಒಂದು ಅಭಿವೃದ್ಧಿ ಕೆಲಸ ಆಗ್ತಾ ಇಲ್ಲ. ಮುಂದಿನ ಎರಡು ಮೂರು ತಿಂಗಳು ಸರ್ಕಾರಿ ನೌಕರರಿಗೆ ಸಂಬಳ ‌ಕೊಡಲು ಆಗದ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಅಲ್ಪಸಂಖ್ಯಾತರ ಹಿಂದೆ ಹೊರಟಿದ್ದಾರೆ

ಇಂಥ ದುಷ್ಟ ಸರ್ಕಾರ ಹಿಂದೆಂದೂ ಬಂದಿರಲಿಲ್ಲ. ನಮ್ಮ ಹಿಂದೂಗಳು ಮೆರವಣಿಗೆ ಮಾಡೋಕೆ ಹೋದ್ರೆ ಇವರು ಅಡ್ಡಿ ಮಾಡ್ತಾರೆ. ಸಿದ್ದರಾಮಯ್ಯ ಕೇವಲ ಅಲ್ಪಸಂಖ್ಯಾತರ ಹಿಂದೆ ಹೊರಟಿದ್ದಾರೆ. ಇವರಿಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಿದೆ. ಗ್ಯಾರಂಟಿ ಭ್ರಮೆಯಲ್ಲಿ ಇರೋರಿಗೆ ಕೇಂದ್ರದ ಯೋಜನೆ ಬಗ್ಗೆ ವಿವರಿಸಬೇಕಿದೆ. ಪ್ರಜ್ವಲ್ ರೇವಣ್ಣರನ್ನು ಹೆಚ್ಚಿನ ಲೀಡ್​ನಲ್ಲಿ ಗೆಲ್ಲಿಸಿ ಎಂದು ವಿಜಯೇಂದ್ರ ಮನವಿ  ಮಾಡಿದರು.

RELATED ARTICLES

Related Articles

TRENDING ARTICLES