Friday, May 3, 2024

ಜನ ಪ್ರಹ್ಲಾದ್​ ಜೋಶಿ ಪರ ಇದಾರೆ, ಸ್ವಾಮೀಜಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಹೋಗಬಾರದು: ಬಿಎಸ್​ವೈ

ಹುಬ್ಬಳ್ಳಿ : ಚುನಾವಣೆಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸಲಹೆ ನೀಡಿದರು.

ಹುಬ್ಬಳ್ಳಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್​ ಜೋಶಿ ಅವರ ಪರ ಪ್ರಚಾರಕ್ಕೆ ಆಗಮಿಸಿದ್ದ ಅವರು ಮಾದ್ಯಮದವರೊಂದಿಗೆ ಮಾತನಾಡಿದರು, ರಾಜ್ಯದಲ್ಲಿ ಬಿಜೆಪಿ ಮತ್ತು ಮೋದಿ ಅಲೆ ಇದೆ, ಕ್ಷೇತ್ರದಲ್ಲಿ ಪ್ರಹ್ಲಾದ್ ಜೋಶಿ ಮಾಡಿರುವ ಅಭಿವೃದ್ದಿ ಕಾರ್ಯ ಮನೆ ಮನೆಗೂ ಗೊತ್ತಿದೆ, ಪ್ರಹ್ಲಾದ್​ ಜೋಶಿ ಒಬ್ಬ ಪ್ರಬುದ್ದ ರಾಜಕಾರಣಿ, ಸರ್ವಾನುಮತದಿಂದ ಆಯ್ಕೆ ಮಾಡಿ ಕಳಿಸಬೇಕಾದ ವ್ಯಕ್ತಿ, ಇದೀಗ ಯಾರೋ ಒಬ್ಬ ಸ್ವಾಮೀಜಿ ಸ್ಪರ್ಧೆ ಮಾಡುತ್ತಿದ್ದಾರೆ ಜನ ಪ್ರಹ್ಲದ್​ ಜೋಶಿ ಪರ ಇದ್ದಾರೆ ಎಂದರು.

ಇದನ್ನೂ ಓದಿ: ಮಹಿಳೆಯರನ್ನು ಅವಮಾನಿಸಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಕುಮಾರಸ್ವಾಮಿ ಸ್ಪಷ್ಟನೆ

ದಿಂಗಾಲೇಶ್ವರ ಸ್ವಾಮೀಜಿ ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬಾರದು, ಸ್ವಾಮಿಜಿ ಅವರಿಗೆ ಮತ್ತೊಮ್ಮೆ ವಿನಂತಿ ಮಾಡುತ್ತೇನೆ ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು, ಈ ಕುರಿತು ಈಗಾಗಲೇ ಅವರೊಂದಿಗೆ ಮಾತನಾಡಿದ್ದೇನೆ ಇನ್ನೊಮ್ಮೆ ಫೋನ್ ಕರೆ ಮೂಲಕ ಅವರನ್ನು ಮನವೊಲಿಸುವ ಕೆಲಸ ಮಾಡುವೆ ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES