Tuesday, April 30, 2024

ಗೆಳೆಯ ದ್ವಾರಕೀಶ್ ನೆನೆದ ನಟ ರಜನಿಕಾಂತ್ ಕಣ್ಣೀರು : ನಾಳೆ ಥಿಯೇಟರ್​ಗಳಲ್ಲಿ ಒಂದು ಶೋ ಬಂದ್

ಬೆಂಗಳೂರು : ಸ್ಯಾಂಡಲ್​ವುಡ್​​ನ ಹಿರಿಯ ನಟ ದ್ವಾರಕೀಶ್ ವಿಧಿವಶ ಹಿನ್ನಲೆ ನಾಳೆ ಎಲ್ಲ ಥಿಯೇಟರ್​ಗಳಲ್ಲಿ ಒಂದು ಶೋ ಬಂದ್ ಮಾಡಿ, ಗೌರವಾರ್ಥ ಸಮರ್ಪಣೆ ಮಾಡಲಾಗಿದೆ. ನಾಳೆ ಒಂದು ದಿನದ ಮಟ್ಟಿಗೆ ಚಿತ್ರರಂಗದ ಎಲ್ಲ ಚಟುವಟಿಕೆಗಳು ಬಂದ್ ಮಾಡಲಾಗಿದೆ.

ಇನ್ನು ನಾಳೆ ಬೆಳಗ್ಗೆ 7ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ನಟ ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಿಗ್ಗೆ 7ರಿಂದ 11 ಗಂಟೆ ತನಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು
ನಾಳೆ ಬೆ.11.30ಕ್ಕೆ ಚಾಮರಾಜಪೇಟೆಯಲ್ಲಿ ದ್ವಾರಕೀಶ್ ಅಂತ್ಯಕ್ರಿಯೆಯನ್ನ ಮಾಡಲಾಗುತ್ತದೆ.

ಗೆಳೆಯ ದ್ವಾರಕೀಶ್ ನೆನೆದ ನಟ ರಜನಿಕಾಂತ್ :

ದ್ವಾರಕೀಶ್ ಮತ್ತು ರಜನಿಕಾಂತ್ ಬಹುಕಾಲದ ಗೆಳೆಯರು. ದ್ವಾರಕೀಶ್ ಹೇಳಿದವರಿಗೆ ರಜನಿಕಾಂತ್ ಕಾಲ್ ಶೀಟ್ ಕೊಡುತ್ತಿದ್ದರು ಎಂದು ಸ್ವತಃ ದ್ವಾರಕೀಶ್ ಅವರೇ ಹೇಳಿದ್ದಾರೆ. ಅಡ್ಡ ವಾರಿಸು ಸಿನಿಮಾದಲ್ಲಿ ರಜನಿಕಾಂತ್ ನಟಿಸಿದ್ದರೆ, ಈ ಸಿನಿಮಾವನ್ನು ದ್ವಾರಕೀಶ್ ನಿರ್ಮಾಣ ಮಾಡಿದ್ದರು. 1983ರಲ್ಲಿ ಈ ಚಿತ್ರ ಬಿಡುಗಡೆ ಆಗಿತ್ತು. ಆನಂತರ ನೀ ಬರೆದ ಕಾದಂಬರಿ, ಗುಂಗುವಾ ಸೇರಿದಂತೆ ಹಲವು ಚಿತ್ರಗಳಲ್ಲಿಇಬ್ಬರೂ ಕೆಲಸ ಮಾಡಿದ್ದಾರೆ.

ಇದೀಗ ಈ ಸ್ನೇಹಕ್ಕೆ ಕುರುಹು ಎನ್ನುವಂತೆ ತಮ್ಮಿಬ್ಬರ ಸ್ನೇಹವನ್ನು ರಜನಿಕಾಂತ್ ನೆನಪಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ರಜನಿ, ನನ್ನ ಬಹುಕಾಲದ ಆತ್ಮೀಯ ಗೆಳೆಯ ದ್ವಾರಕೀಶ್ ಅವರ ನಿಧನ ನನಗೆ ಅತೀವ ನೋವನ್ನು ತಂದಿದೆ. ಹಾಸ್ಯ ನಟನಾಗಿ ವೃತ್ತಿ ಜೀವನ ಆರಂಭಿಸಿ, ಆನಂತರ ದೊಡ್ಡ ನಿರ್ಮಾಪಕರು ಹಾಗೂ ನಿರ್ದೇಶಕರಾಗಿ ಬೆಳೆದರು ಹಾಗೂ ಬೆಳೆಸಿದರು. ಅವರ ಅಗಲಿಕೆ ನೋವು ತಂದಿದೆ. ಅವರಿಗೆ ಭಾವ ಪೂರ್ಣ ಸಂತಾಪ ಎಂದು ಬರೆದುಕೊಂಡಿದ್ದಾರೆ.

 

RELATED ARTICLES

Related Articles

TRENDING ARTICLES