Thursday, May 2, 2024

ಏ.17ರಂದು ರಾಜ್ಯಕ್ಕೆ ಆಗಮಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ಕೈ ಅಭ್ಯರ್ಥಿಗಳ ಪರ ಪ್ರಚಾರ

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್​ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನಾಳೆ ಏ.17ಕ್ಕೆ ರಾಜ್ಯಕ್ಕೆ ಆಗಮಿಸಲಿದ್ದಾರೆ.

ರಾಜ್ಯದಲ್ಲಿ ಲೋಕಸಭಾ ಚುಣಾವಣೆ ಕಣ ರಂಗೇರಿದ್ದು ಪ್ರಧಾನಿ ಮೋದಿ ಸೇರಿದಂತೆ ಸ್ಟಾರ್ ಪ್ರಚಾರಕರು ಆಗಮಿಸಿ ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವ ಬೆನ್ನಲ್ಲೇ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳ ಪರ ಚುನಾವಣೆ ಪ್ರಚಾರ ನಡೆಸಲು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮುಂದಾಗಿದ್ದಾರೆ.

ಇದನ್ನೂ ಓದಿ: ಮಹಿಳೆಯರನ್ನು ಅವಮಾನಿಸಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಕುಮಾರಸ್ವಾಮಿ ಸ್ಪಷ್ಟನೆ

ಜೆಡಿಎಸ್​ ಅಭ್ಯರ್ಥಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿನಿಧಿಸುತ್ತಿರುವ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ಪರ ಪ್ರಚಾರ ನಡೆಸುವ ಸಾಧ್ಯತೆ ಇದ್ದು, ತುಮಕೂರಿನಲ್ಲಿ ಪ್ರಚಾರದ ವೇಳೆ ಗ್ಯಾರೆಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರು ದಾರಿತಪ್ಪುತ್ತಿದ್ದಾರೆ ಎನ್ನುವ ಹೇಳಿಕೆಯನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಪ್ರಚಾರ ನಡೆಸುವ ಸಾಧ್ಯತೆ ಇದೆ.

ಇನ್ನು ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಗೌತಮ್​ ಪರ ಪ್ರಚಾರ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

RELATED ARTICLES

Related Articles

TRENDING ARTICLES