ಬೆಂಗಳೂರು: ಕಳೆದ ಎಲ್ಲಾ ಸೀಸನ್ಗಳಲ್ಲು ಐಪಿಎಲ್ ಪಂದ್ಯಗಳಲ್ಲಿ ಆಡಿದ ಆರ್ಸಿಬಿ ತಂಡ ಕಪ್ ಗೆಲ್ಲದಿದ್ದರೂ ಕೂಡ ಇಷ್ಟೊಂದು ಕಳಪೆ ಮಟ್ಟದ ಆಟವಾಡಿರಲಿಲ್ಲ. ಈ ಬಾರಿ ಆಡಿದ 7 ಪಂದ್ಯಗಳ ಪೈಕಿ ಕೇವಲ ಒಂದು ಪಂದ್ಯ ಮಾತ್ರ ಗೆಲುವು ಕಂಡಿದೆ. ದುರಾದೃಷ್ಟವಶಾತ್ ಈ ಬಾರಿ ತವರಿನಲ್ಲೇ ಅತ್ಯಧಿಕ ಪಂದ್ಯ ಸೋತ ಅವಮಾನಕ್ಕೆ ಸಿಲುಕಿದೆ.
ಟೂರ್ನಿ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಇದು ಆರ್ಸಿಬಿಯ ಹೊಸ ಅಧ್ಯಾಯ ಎಂದು ಹೇಳುವು ಮೂಲಕ ಆರ್ಸಿಬಿ ಹವಾ ಸೃಷ್ಟಿಸಿತ್ತು. ಇದೀಗ ಸತತ ಸೋಲಿನಿಂದ ಸಾಮಾಜಿಕ ಜಾಲತಾಣದಲ್ಲಿ ಮುಗಿದು ಹೋದ ಅಧ್ಯಾಯ ಅಂತ ಅಭಿಮಾನಿಗಳು ವ್ಯಂಗ್ಯವಾಗಿ ಹೇಳತೊಡಗಿದ್ದಾರೆ. ಆರ್ಸಿಬಿ ಮೇಲೆ ಸ್ವತಃ ಅಭಿಮಾನಿಗಳೇ ವಿಶ್ವಾಸ ಕಳೆದುಕೊಂಡಿದ್ದಾರೆ. ಕೊನೆಯ ಸ್ಥಾನದಲ್ಲಿದ್ದರೂ ಆರ್ಸಿಬಿಗೆ ಇನ್ನೂ ಪ್ಲೇ ಆಫ್ ಅವಕಾಶ ಜೀವಂತವಾಗಿದೆ.
ಇದನ್ನೂ ಓದಿ: ಮತ್ತೆ ಸೋತ RCB : ಡು ಪ್ಲೆಸಿಸ್-ಡಿಕೆ ಆಟ ವ್ಯರ್ಥ, RCBಗೆ 6ನೇ ಸೋಲು
ಸದ್ಯದ ಪರಿಸ್ಥಿತಿಯಲ್ಲಿ ಆರ್ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ತಂಡದ ಮೇಲಿದೆ. ಈಗಾಗಲೇ 7 ಪಂದ್ಯ ಆಡಿದ್ದು, 1 ಪಂದ್ಯ ಗೆದ್ದು, 6 ಪಂದ್ಯದಲ್ಲಿ ಸೋಲು ಕಂಡಿದೆ. 2 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್ ಹಂತದಲ್ಲಿ ಇನ್ನೂ 7 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪ್ಲೇ ಆಫ್ ಅವಕಾಶ ಇದೆ. ಜತೆಗೆ ಉಳಿದ ತಂಡಗಳ ಪ್ರದರ್ಶನವೂ ಆರ್ಸಿಬಿ ಪ್ಲೇಆಫ್ ಹಾದಿಯ ಮೇಲೆ ಪರಿಣಾಮ ಬೀರಲಿದೆ.
ಹೈದರಾಬಾದ್ ವಿರುದ್ಧ ಸೋಲು :
ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಎಸ್ಆರ್ಎಚ್ ತಂಡ ವಿಶ್ವ ದಾಖಲೆಯ 287 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆರ್ಸಿಬಿ ತಂಡ ತನ್ನ ಪಾಲಿನ ಓವರ್ಗಳು ಮುಕ್ತಾಯಗೊಂಡಾಗ 7 ವಿಕೆಟ್ಗೆ 262 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಆರ್ಸಿಬಿ ಪರ ಒನ್ ಮ್ಯಾನ್ ಆರ್ಮಿ ರೀತಿ ಹೋರಾಟ ಸಂಘಟಿಸಿದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ 35 ಎಸೆತಗಳಲ್ಲಿ 83 ರನ್ ಬಾರಿಸಿದರು.