Sunday, May 12, 2024

ರಾಜ್ಯಾಧ್ಯಕ್ಷ ಆಗೋಕೆ ನಿನಗೇನು ಯೋಗ್ಯತೆ ಇದೆ : ಈಶ್ವರಪ್ಪ

ಶಿವಮೊಗ್ಗ : ಈಶ್ವರಪ್ಪನವರು ಡಿಸಿಎಂ ಹಾಗೂ ಮಂತ್ರಿಯಾಗಿ ಶಿವಮೊಗ್ಗ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬ ಬಿ.ವೈ. ವಿಜಯೇಂದ್ರ ಹೇಳಿಕೆಗೆ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ಆಗೋಕೆ ನಿನಗೇನು ಯೋಗ್ಯತೆ ಇದೆ? ಎಂದು ಪ್ರಶ್ನೆ ಮಾಡಿದ್ದಾರೆ.

ನಿನ್ನ ಪುಕ್ಕಟ್ಟೆ ಮಾತುಗಳಿಗೆ ನಾನು ಬೆಲೆ ಕೊಡಲ್ಲ. ಆ ಸ್ಥಾನದಲ್ಲಿ ಕೂರಲು ನಿನಗೇನು ಯೋಗ್ಯತೆ ಇದೆ. 40 ವರ್ಷ ಪಕ್ಷಕ್ಕಾಗಿ ಶ್ರಮ ಹಾಕಿದ್ದೇನೆ. ನಿಮಪ್ಪನ (ಬಿ.ಎಸ್. ಯಡಿಯೂರಪ್ಪ) ಶ್ರಮದಿಂದ ನೀನು ರಾಜ್ಯಾಧ್ಯಕ್ಷ ಆಗಿದ್ದೀಯಾ. ಈ ರೀತಿ ಮಾತನಾಡೋಕೆ ನಿನಗೆ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಗೆ ನಾನು ಏನು ಮಾಡಿದ್ದೇನೆ ಎನ್ನುವುದು ಜಿಲ್ಲೆಯ ಜನಕ್ಕೆ ಗೊತ್ತಿದೆ. ಶಿಕಾರಿಪುರದಲ್ಲಿ 60 ಸಾವಿರ ಇದ್ದ ಲೀಡ್ 10 ಸಾವಿರಕ್ಕೆ ಇಳಿದಿದೆ. ಹೇ ಹುಷಾರ್.. ನಾನು ಬೇರೆ ಭಾಷೆಯಲ್ಲಿ ಮಾತನಾಡಬೇಕಾಗುತ್ತದೆ. ಪಕ್ಷಕ್ಕೆ ನಿನ್ನ ಕೊಡುಗೆ ಏನು..? ಎಂದು ವಿಜಯೇಂದ್ರ ವಿರುದ್ಧ ಹರಿಹಾಯ್ದಿದ್ದಾರೆ.

ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇವತ್ತು ನ್ಯಾಯಾಲಯದ ಮುಂಭಾಗದಲ್ಲಿ ವಕೀಲರನ್ನ ಭೇಟಿ ಮಾಡಿದ್ದೇನೆ. ವಕೀಲರು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

RELATED ARTICLES

Related Articles

TRENDING ARTICLES