Tuesday, May 7, 2024

IPL 2024 ರಲ್ಲಿ ಕಳಪೆ ಪ್ರದರ್ಶನ : RCB ತಂಡವನ್ನು ಮಾರಿಬಿಡಿ ಎಂದ ಖ್ಯಾತ ಟೆನ್ನಿಸ್​ ತಾರೆ

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ತಂಡದ ಕಳಪೆ ಪ್ರದರ್ಶನಕ್ಕೆ ಬೇಸತ್ತು ಖ್ಯಾತ ಟೆನ್ನಿಸ್​ ತಾರೆ ಮಹೇಶ್​ ಭೂಪತಿ ಪ್ರತಿಕ್ರಿಯೆ ನೀಡಿ ಆರ್​ಸಿಬಿ ತಂಡವನ್ನು ಮಾರಿಬಿಡಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವ ಅವರು, ಕ್ರೀಡೆ, ಐಪಿಎಲ್, ಅಭಿಮಾನಿಗಳು ಮತ್ತು ಆಟಗಾರರ ಸಲುವಾಗಿ ಬಿಸಿಸಿಐ ಇತರ ತಂಡಗಳು ಮಾಡಿದ ರೀತಿಯಲ್ಲಿ ಕ್ರೀಡಾ ಫ್ರಾಂಚೈಸಿಯನ್ನು ನಿರ್ಮಿಸಲು ಕಾಳಜಿವಹಿಸುವ ಹೊಸ ಮಾಲೀಕರಿಗೆ ಆರ್​ಸಿಬಿ ತಂಡವನ್ನು ಮಾರಾಟ ಮಾಡುವ ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ ಎಂದು ಪೋಸ್ಟ್​ ಹಂಚಿಕೊಳ್ಳುವ ಮೂಲಕ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: IPL 2024: ಆರ್​ಸಿಬಿ ಸತತ ಸೋಲು ಕಂಡರೂ ಪ್ಲೇ ಆಫ್​ ಕನಸು ಜೀವಂತ

ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡ ಕಪ್​ ಗೆಲ್ಲದಿದ್ದರೂ ಕೂಡ ಇಷ್ಟೊಂದು ಕಳಪೆ ಮಟ್ಟದ ಆಟವಾಡಿರಲಿಲ್ಲ. ಈ ಬಾರಿ ಆಡಿದ 7 ಪಂದ್ಯಗಳ ಪೈಕಿ ಕೇವಲ ಒಂದು ಪಂದ್ಯ ಮಾತ್ರ ಗೆಲುವು ಕಂಡಿದೆ. ದುರಾದೃಷ್ಟವಶಾತ್‌ ಈ ಬಾರಿ ತವರಿನಲ್ಲೇ ಅತ್ಯಧಿಕ ಪಂದ್ಯ ಸೋತ ಅವಮಾನಕ್ಕೆ ಸಿಲುಕಿದೆ.

ತಂಡದದಲ್ಲಿ ಸ್ಟಾರ್​ ಆಟಗಾರರಿದ್ದರೂ ಕೂಡ ಯಾರು ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ವಿರಾಟ್​ ಕೊಹ್ಲಿ, ದಿನೇಶ್​ ಕಾರ್ತಿಕ್​ ಮಾತ್ರ ತಂಡದ ನಂಬಿಕಸ್ಥ ಆಟಗಾರರಾಗಿದ್ದಾರೆ. ಆರ್​ಸಿಬಿ ಬ್ಯಾಟಿಂಗ್‌ನಲ್ಲಿ ಯಶಸ್ವಿಯಾದರೆ ಬೌಲಿಂಗ್‌ನಲ್ಲಿ ಎಡವುತ್ತಿದೆ. ಬೌಲಿಂಗ್‌ನಲ್ಲಿ ಯಶಸ್ವಿಯಾದರೆ, ಬ್ಯಾಟಿಂಗ್‌ನಲ್ಲಿ ಪಲ್ಟಿ ಹೊಡೆಯುತ್ತಿದೆ. ಬೌಲಿಂಗ್‌ ಪಡೆಯಂತೂ ಸಂಪೂರ್ಣ ಮೊನಚು ಕಳೆದುಕೊಂಡಿದೆ. ಇದು, ಸಹಜವಾಗಿ ಆರ್‌ಸಿಬಿಯನ್ನು ಸೋಲಿನ ಸುಳಿಗೆ ತಳ್ಳಿದೆ. ಒಟ್ಟಿನಲ್ಲಿ ಸಂಘಟನಾತ್ಮಕ ಹೋರಾಟವೇ ಬರುತ್ತಿಲ್ಲ.

RELATED ARTICLES

Related Articles

TRENDING ARTICLES