ಆನೇಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಹೆರಿಗೆಗೆ ಬಂದಿದ್ದ ತಾಯಿ, ಮಗುವಿಗೆ ಜನ್ಮ ನೀಡಿ ಸಾವಿಗೀಡಾಗಿರುವ ಘಟನೆ ತಾಲೂಕಿನ ಅಮ್ಮ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಆನೇಕಲ್ ಪಟ್ಟಣದ ನಿವಾಸಿ ಕವಿತಾ ಸಾವಿಗೀಡಾದ ಮಹಿಳೆ, ಪಟ್ಟಣದ ಅಮ್ಮ ಎಂಬ ಖಾಸಗಿ ಆಸ್ಪತ್ರೆಗೆ ಹೆರಿಗೆಗೆಂದು ಏ.13ರಂದು ಆಗಮಿಸಿದ್ದ ಕವಿತಾಗೆ ವೈದ್ಯೆ ಮಮತಾ ಏ.14ರಂದು ಆಪರೇಷನ್ ಮಾಡವುದಾಗಿ ತಿಳಿಸಿದ್ದರು. ಹೆರಿಗೆ ಬಳಿಕ ತೀವ್ರ ರಕ್ತಸ್ರಾವವಾದ ಕಾರಣ ಕವಿತಾರನ್ನು ನಾರಾಯಣ ಹೃದಯಾಲಯಕ್ಕೆ ಶಿಫ್ಟ್ ಮಾಡಲಾಗಿತ್ತು. ಆದರೇ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ: ಮೂವರು ಸಾವು!
ಕವಿತಾ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿರುವ ಕುಟುಂಬಸ್ಥರು ಆಸ್ಪತ್ರೆಯ ವಿರುದ್ದ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.