Thursday, May 2, 2024

ಟಾಸ್ ಗೆದ್ದ ರಾಜಸ್ಥಾನ ಬೌಲಿಂಗ್ ಆಯ್ಕೆ : KKR ಗೆದ್ದರೆ RR ಅಗ್ರಸ್ಥಾನಕ್ಕೆ ಕುತ್ತು?

ಬೆಂಗಳೂರು : ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್​ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಐಪಿಎಲ್​ನ 31ನೇ ಪಂದ್ಯ ನಡೆಯುತ್ತಿದೆ. ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನದಲ್ಲಿರುವ ತಂಡಗಳು ನಂಬರ್ 1 ಪಟ್ಟಕ್ಕಾಗಿ ಸೆಣಸಲಿವೆ.

ರಾಜಸ್ಥಾನ ಆಡಿರುವ 6 ಪಂದ್ಯಗಳಲ್ಲಿ 5 ಗೆಲುವು ಹಾಗೂ ಒಂದು ಸೋಲು ಕಂಡಿದೆ. 10 ಅಂಕಗಳೊಂದಿಗೆ ಪಾಯಿಂಟ್ಸ್​ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಕೆಕೆಆರ್ ಆಡಿರುವ ​ 5 ಪಂದ್ಯಗಳಲ್ಲಿ 4 ಪಂದ್ಯ ಗೆದ್ದು ಒಂದು ಪಂದ್ಯ ಸೋತಿದೆ. 8 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಆರ್​ಆರ್​ ಗೆದ್ದರೆ ಅಗ್ರಸ್ಥಾನ ಭದ್ರವಾಗಲಿದೆ. ಕೆಕೆಆರ್​ ಗೆದ್ದರೆ ಆರ್​ಆರ್​ ಸ್ಥಾನಕ್ಕೆ ಕುತ್ತು ಬರಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್

ಶ್ರೇಯಸ್ ಅಯ್ಯರ್ (ನಾಯಕ), ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಸುನಿಲ್ ನರೈನ್, ರಾಘವಂಶಿ, ರಿಂಕು ಸಿಂಗ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

ರಾಜಸ್ಥಾನ್ ರಾಯಲ್ಸ್

ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ಆರ್. ಅಶ್ವಿನ್, ಅವೇಶ್ ಖಾನ್, ಟ್ರೆಂಟ್ ಬೌಲ್ಟ್, ಕುಲದೀಪ್ ಸೇನ್, ಯುಜ್ವೇಂದ್ರ ಚಾಹಲ್

RELATED ARTICLES

Related Articles

TRENDING ARTICLES