ಹುಬ್ಬಳ್ಳಿ /ಧಾರವಾಡ: ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಸಮೀಪ ಸಂಭವಿಸಿದೆ.
ಕಾರಿನಲ್ಲಿದ್ದವರು ಆಂಧ್ರ ಪ್ರದೇಶದ ಕರ್ನೂಲು ಮೂಲದವರು ಎಂದು ಗುರುತಿಸಲಾಗಿದೆ, ಕಾರು, ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ, ಒರ್ವನಿಗೆ ಗಂಭೀರ ಗಾಯಗಳಾಗಿದೆ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆಸಲಾಗಿದೆ.
ಇದನ್ನೂ ಓದಿ: IPL 2024: ಆರ್ಸಿಬಿ ಸತತ ಸೋಲು ಕಂಡರೂ ಪ್ಲೇ ಆಫ್ ಕನಸು ಜೀವಂತ
ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೋಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.