Wednesday, May 1, 2024

ಜೈ ಶ್ರೀರಾಮ್ ಅನ್ನಂಗಿಲ್ಲಾ, ಓನ್ಲಿ ಅಲ್ಲಾ.. ‘ಅಲ್ಲಾ ಹು ಅಕ್ಬರ್’ ಅನ್ನಬೇಕು : ಅನ್ಯಕೋಮಿನ ಯುವಕರ ಪುಂಡಾಟ

ಬೆಂಗಳೂರು : ಶ್ರೀರಾಮ ನವಮಿ ಆಚರಣೆ ಮುಗಿಸಿಕೊಂಡು ಹೋಗುತ್ತಿದ್ದ ಹಿಂದೂ ಯುವಕರನ್ನು ಅಡ್ಡಗಟ್ಟಿ ಅನ್ಯಕೋಮಿನ ಯುವಕರು ಪುಂಡಾಟ ಮೆರೆದಿದ್ದಾರೆ.

ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ಈ ನಡೆದಿದೆ. ಜೈ ಶ್ರೀರಾಮ್ ಘೋಷಣೆ ಕೂಗಿದ ಯುವಕರಿಗೆ ಜೈ ಶ್ರೀರಾಮ್ ಎಂದು ಯಾಕೆ ಕೂಗ್ತಿರಾ, ಓನ್ಲೀ ಅಲ್ಲಾ ಹು ಅಕ್ಬರ್ ಅನ್ನಿ ಎಂದು ಧಮ್ಕಿ ಹಾಕಿದ್ದಾರೆ.

ಇಬ್ಬರು ಅನ್ಯಕೋಮಿನ ಯುವಕರು ಕಾರನ್ನು ಅಡ್ಡಗಟ್ಟಿ ಜೈ ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಇಲ್ಲ. ಓನ್ಲೀ ಅಲ್ಲಾ ಹು ಅಕ್ಬರ್ ಅಂತ ಹೇಳಿ ಎಂದಿದ್ದಾರೆ. ಅಲ್ಲದೇ, ಕಾರಿನಲ್ಲಿ ಇದ್ದವರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ.

ಈ ವೇಳೆ ಕಾರಿನಲ್ಲಿದ್ದ ಯುವಕರು, ಇಂದು ರಾಮ ನವಮಿ ಹಬ್ಬ. ನಾವು ನಿಮ್ಮ ಹಬ್ಬದಲ್ಲಿ ಈ ರೀತಿ ಮಾಡ್ತಿವಾ? ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಮತ್ತೆ ಇಬ್ಬರು ಯುವಕರು ಸೇರಿಕೊಂಡು ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯುವಕ ಮೇಲೆ ದೂರು ದಾಖಲು

ಘಟನೆ ಕುರಿತು ಈಶಾನ್ಯ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾಹಿತಿ ನೀಡಿದ್ದಾರೆ. ಮೂವರು ಯುವಕರು ಕಾರಿನಲ್ಲಿ ಹೋಗುವಾಗ ಬಾವುಟ ಹಿಡಿದುಕೊಂಡು ಜೈ ಶ್ರೀರಾಮ್ ಅಂದಿದ್ದಾರೆ. ಈ ವೇಳೆ ಅನ್ಯ ಕೋಮಿನ ಯುವಕರು ಕಾರು ಅಡ್ಡಗಟ್ಟಿದ್ದಾರೆ. ಜೈ ಶ್ರೀರಾಮ್ ಅಂತ ಯಾಕೆ ಕೂಗ್ತಿರಾ, ಅಲ್ಲಾ ಅನ್ನಿ ಎಂದು ಗಲಾಟೆ ಮಾಡಿದ್ದಾರೆ. ಮೂವರು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಐಪಿಸಿ ಸೆಕ್ಷನ್ 295a, 298, 143, 147, 504,324, 326, 149, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನಿಡಿದ್ದಾರೆ.

 

View this post on Instagram

 

A post shared by Sathish Kumar (@sathish_kandagalpura)

RELATED ARTICLES

Related Articles

TRENDING ARTICLES