Tuesday, April 30, 2024

ವಾಟರ್​ ಟ್ಯಾಂಕರ್​ ಮತ್ತು ಬೈಕ್​ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು!

ಬೆಂಗಳೂರು : ನೀರಿನ ಟ್ಯಾಂಕರ್​ ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಹನ ಸವಾರನೊಬ್ಬ ಸ್ಥಳದಲ್ಲೆ ಸಾವಿಗೀಡಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದ್ದು ತಡವಾಡಿ ಬೆಳಕಿಗೆ ಬಂದಿದೆ.

ಹರೀಶ್​ ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿ, ಮತ್ತೊಬ್ಬ ವಾಹನ ಸವಾರ ಸುಚಿತ್​ಗೆ ಗಂಭೀರ ಗಾಯಗಳಾಗಿದೆ. ಈ ವಾಹನ ಸವಾರರು ಭಾನುವಾರ ರಾತ್ರಿ ಮಾಗಡಿ ರಸ್ತೆಯ ಕಾವೇರಿ ಫ್ಯಾಷನ್ಸ್​ ಬಳಿ ಹೋಗುವಾಗ ಎದುರಿಗೆ ಬಂದ ವಾಟರ್​ ಟ್ಯಾಂಕರ್ ವಾಹನ ಡಿಕ್ಕಿಯಾಗಿದೆ ಡಿಕ್ಕಿಯ ರಭಸಕ್ಕೆ ಹಿಂಬದಿಯ ವಾನಸ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಬ್ಬ ಬೈಕ್​ ಸವಾರನಿಗೆ ಗಂಭೀರ ಗಾಯಗಳಾಗಿದೆ. ಅಪಘಾತದ ಸಂಪೂರ್ಣ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಏರ್ಪೋರ್ಟ್ ವೀಡಿಯೋ ಚಿತ್ರೀಕರಿಸಿದ ಯೂಟ್ಯೂಬರ್ ವಿರುದ್ದ FIR ದಾಖಲು!

ಬೈಕ್​ ಸವಾರ ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರ ಪೋಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

RELATED ARTICLES

Related Articles

TRENDING ARTICLES