ಬೆಂಗಳೂರು : ನೀರಿನ ಟ್ಯಾಂಕರ್ ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಾಹನ ಸವಾರನೊಬ್ಬ ಸ್ಥಳದಲ್ಲೆ ಸಾವಿಗೀಡಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದ್ದು ತಡವಾಡಿ ಬೆಳಕಿಗೆ ಬಂದಿದೆ.
ಹರೀಶ್ ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿ, ಮತ್ತೊಬ್ಬ ವಾಹನ ಸವಾರ ಸುಚಿತ್ಗೆ ಗಂಭೀರ ಗಾಯಗಳಾಗಿದೆ. ಈ ವಾಹನ ಸವಾರರು ಭಾನುವಾರ ರಾತ್ರಿ ಮಾಗಡಿ ರಸ್ತೆಯ ಕಾವೇರಿ ಫ್ಯಾಷನ್ಸ್ ಬಳಿ ಹೋಗುವಾಗ ಎದುರಿಗೆ ಬಂದ ವಾಟರ್ ಟ್ಯಾಂಕರ್ ವಾಹನ ಡಿಕ್ಕಿಯಾಗಿದೆ ಡಿಕ್ಕಿಯ ರಭಸಕ್ಕೆ ಹಿಂಬದಿಯ ವಾನಸ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಬ್ಬ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದೆ. ಅಪಘಾತದ ಸಂಪೂರ್ಣ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ಏರ್ಪೋರ್ಟ್ ವೀಡಿಯೋ ಚಿತ್ರೀಕರಿಸಿದ ಯೂಟ್ಯೂಬರ್ ವಿರುದ್ದ FIR ದಾಖಲು!
ಬೈಕ್ ಸವಾರ ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.