ಬೆಂಗಳೂರು : ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಪ್ರಚಾರ ತೀವ್ರಗೊಳಿಸಿರುವ ಬಿಜೆಪಿ, ಜೆಡಿಎಸ್ ಮೈತ್ರಿ ನಾಯಕರು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಕ್ಕೆ ಕರೆಸಲು ತೀರ್ಮಾನಿಸಿದ್ದಾರೆ.
ಏ. 20ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಕಳೆದ ಭಾನುವಾರ ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜತೆ ವೇದಿಕೆ ಹಂಚಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಬಳಿಕ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದರು.
ಇದನ್ನೂ ಓದಿ : ಏ.19. ನಾಳೆ ಮೊದಲ ಹಂತದ ಲೋಕಸಭಾ ಎಲೆಕ್ಷನ್
ಇದೀಗ ಮತ್ತೆ ಪ್ರಧಾನಿ ಮೋದಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಏಪ್ರಿಲ್ 20ರಂದು ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ. ಇದೇ ಏಪ್ರಿಲ್ 20 ರಂದು ಚಿಕ್ಕಬಳ್ಳಾಪುರದ ದೇವನಹಳ್ಳಿಯಲ್ಲಿ ಮತ್ತೊಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.