Wednesday, May 1, 2024

ಧಾರವಾಡ ಲೋಕಸಭಾ ಕ್ಷೇತ್ರ : ಪಕ್ಷೇತರ ಅಭ್ಯರ್ಥಿಯಾಗಿ ದಿಂಗಾಲೇಶ್ವರ ಶ್ರೀ ನಾಮಪತ್ರ ಸಲ್ಲಿಕೆ

ಧಾರವಾಡ : ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಲಿಂಗಾಯತ ಸಮುದಾಯದ ದಿಂಗಾಲೇಶ್ವರ ಶ್ರೀ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಯಾವುದೇ ಮೆರವಣಿಗೆ ನಡೆಸದೇ ನೇರವಾಗಿ ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಗಳಿಗೆ ಸಾಂಕೇತಿಕವಾಗಿ ತಮ್ಮ ನಾಮತ್ರವನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ:  ಮಂಡ್ಯ ಕೈ ಅಭ್ಯರ್ಥಿ ಸ್ಟಾರ್​ ಚಂದ್ರು ಪರ ದರ್ಶನ್​ ಪ್ರಚಾರ: ತಪ್ಪೇನಿಲ್ಲ ಎಂದ ಕುಮಾರಸ್ವಾಮಿ

ಇದಕ್ಕೂ ಮುನ್ನ ಟೌನ್​ ಹಾಲ್​ ನಿಂದ ನಡೆಯಬೇಕಾಗಿದ್ದ ಮೆರವಣಿಗೆ ಕಾರಣಾಂತರಗಳಿಂದ ರದ್ದು ಮಾಡಿದ್ದು ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡುವಾಗ ಬೃಹತ್ ಮೆರವಣಿಗೆ ಮೂಲಕ ಸಾಗಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರವು ಬಿಜೆಪಿ ಭದ್ರಕೋಟೆಯಾಗಿದ್ದು ಈ ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರಹ್ಲಾದ್​ ಜೋಶಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇತ್ತೀಚೆಗೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಧಾರವಾಡಕ್ಕೆ ಆಗಮಿಸಿ ಜೋಶಿ ಪರ ಪ್ರಚಾರ ನಡೆಸಿದ್ದರು. ಈ ವೇಳೆ ದಿಂಗಾಲೇಶ್ವರ ಸ್ವಾಮಿಜಿಗಳು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದು ಚುನಾವಣೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡಿಕೊಂಡಿದ್ದರು. ಆದರೇ, ಇಂದು ದಿಂಗಾಲೇಶ್ವರ ಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

RELATED ARTICLES

Related Articles

TRENDING ARTICLES