Wednesday, May 1, 2024

ಆನೇಕಲ್ ದೇವಮೂಲೆಯಲ್ಲಿ ಡಿ.ಕೆ. ಸುರೇಶ್ ಭರ್ಜರಿ ಮತಬೇಟೆ

ಬೆಂಗಳೂರು ಗ್ರಾಮಾಂತರ : ಕರುನಾಡಲ್ಲಿ ಲೋಕಸಮರದ ಅಖಾಡ ದಿನ ದಿನಕ್ಕೂ ರಂಗೇರುತ್ತಿದೆ. ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಬಿರುಸಿನ ಮತಬೇಟೆ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಹೈವೋಲ್ಟೇಜ್​ ರಣಕಣವಾಗಿ ಮಾರ್ಪಟ್ಟಿದೆ. ಹಾಲಿ ಸಂಸದ ಡಿ.ಕೆ. ಸುರೇಶ್ ಗೆದ್ದೇ ಗೆಲ್ಲುತ್ತೇವೆಂದು ವಿಶ್ವಾಸದಲ್ಲಿದ್ದಾರೆ. ಡಿ.ಕೆ. ಸುರೇಶ್ ಮತಬೇಟೆ ಮುಂದುವರಿಸಿದ್ದು, ಆನೇಕಲ್​ನ ದೇವಮೂಲೆ ಎಂದೇ ಕರೆಯಲ್ಪಡುವ ಮಂಗಳೂರಿನ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದರು.

ಮುಗಳೂರು ಯಮರೆ, ಬಿದರಗುಪ್ಪೆ, ಬಳ್ಳೂರು, ಮಾಯಸಂದ್ರ ಮರಸೂರು ಸೇರಿ ಹಲವೆಡೆ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದರು. ಡಿ.ಕೆ. ಸುರೇಶ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಳ್ಳೂರಿನಲ್ಲಿ ಕಳಸ ಹೊತ್ತ ಮಹಿಳೆಯರು ಸ್ವಾಗತ ಕೋರಿದ್ದಾರೆ. ಇನ್ನು ಇದೇ ಸಮಯದಲ್ಲಿ ಡಿ.ಕೆ. ಸುರೇಶ್ ಜೊತೆ ಶಾಸಕ ಶಿವಣ್ಣ, ಸಚಿವರಾದ ರಾಮಲಿಂಗಾರೆಡ್ಡಿ ಸೇರಿ ಇತ್ತೀಚೆಗೆ ದಿವಂಗತರಾದ ಶಿವರಾಂ ಅವರ ಪತ್ನಿ ವಾಣಿ ಶಿವರಾಮ್ ಸಹ ಡಿಕೆ ಸುರೇಶ್ ಜೊತೆಗೂಡಿ ಪ್ರಚಾರದಲ್ಲಿ ಪಾಲ್ಗೊಂಡರು.

ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್​ಗೆ ವ್ಯಾಪಕ ಜನ ಸ್ಪಂದನೆ ಸಿಗ್ತಿದ್ದು, ಮತದಾರ ಪ್ರಭು ಯಾರಿಗೆ ಒಲಿಯುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

RELATED ARTICLES

Related Articles

TRENDING ARTICLES