Wednesday, May 1, 2024

ತಂದೆಗೆ ತಕ್ಕ ಮಗ, ಜಗ ಮೆಚ್ಚಿದ ಮಗ ‘ರಾಘವೇಂದ್ರ’ : ಬಸವರಾಜ ಬೊಮ್ಮಾಯಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ಅದ್ಭುತವಾದ ಜನಸ್ತೋಮ ಕಾಣಿಸುತ್ತಿದೆ. 3 ಲಕ್ಷ ಬಹುಮತಗಳ ಅಂತರದಿಂದ ಬಿ.ವೈ. ರಾಘವೇಂದ್ರ ಅವರು ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಿ. ವೈ. ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆಯ ರೋಡ್‌ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಬಿ.ವೈ. ರಾಘವೇಂದ್ರ ಗೆಲ್ಲುವ ಎಲ್ಲಾ ಸೂಚನೆಗಳು ಕಂಡು ಬಂದಿದೆ. ವಿಜಯೋತ್ಸವ ರೀತಿಯಲ್ಲಿ ಕಾಣುತ್ತಿದೆ. ಶಿವಮೊಗ್ಗ ದೇಶದಲ್ಲಿ ಹೆಚ್ಚು ಅಭಿವೃದ್ಧಿ ಹೊಂದಿದ ಕ್ಷೇತ್ರವಾಗಿದೆ. ರಾಘವೇಂದ್ರ ಮಾಡಿರುವ ಅಭಿವೃದ್ಧಿ, ಪಕ್ಷದ ಸಂಘಟನೆ, ಮೋದಿ ಹೆಸರು ರಾಘವೇಂದ್ರ ಜಯಕ್ಕೆ ಕಾರಣವಾಗಿದೆ ಎಂದು ಹೇಳಿದರು.

ತಂದೆಗೆ ತಕ್ಕ ಮಗ, ಜಗ ಮೆಚ್ಚಿದ ಮಗ ರಾಘವೇಂದ್ರ. ಬಿಜೆಪಿ ಗೆಲ್ಲುತ್ತೆ ಎಂದಾಗ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಪ್ರಶ್ನೆಯೇ ಬರೊಲ್ಲ. ಈಶ್ವರಪ್ಪ ಅವರ ಮನವೊಲಿಕೆ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ತಿಳಿಸಿದರು.

ಜೆಡಿಎಸ್ ಸಹಕಾರ ಸಿಕ್ಕಿರೋದು ಸೌಭಾಗ್ಯ

ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮಾತನಾಡಿ, ಈಗಾಗಲೇ ನಮ್ಮ ಬಿಜೆಪಿ ಪಕ್ಷ ಹಾಗೂ ಜೆಡಿಎಸ್ ಸಹಕಾರದೊಂದಿಗೆ ಎರಡು ನಾಮಪತ್ರ ಸಲ್ಲಿಸಿದ್ದೇನೆ. ನಾಮಪತ್ರ ಸಲ್ಲಿಸಲು ಸಾಕಷ್ಟು  ಜನಸ್ತೋಮ ಬಂದಿದ್ದಾರೆ. ನೂರಕ್ಕೆ ನೂರು ಗೆಲುವು ನಮ್ಮದಾಗಲಿದೆ. ವಿಶೇಷವಾಗಿ ಜೆಡಿಎಸ್ ಸಹಕಾರ ಸಿಕ್ಕಿರೋದು ಸೌಭಾಗ್ಯ. ಯಡಿಯೂರಪ್ಪ, ಕುಮಾರಸ್ವಾಮಿ ಅವರು ಒಂದೇ ವೇದಿಕೆಯಲ್ಲಿ ನೋಡಿ ಜನ ಖುಷಿಯಾಗಿದ್ದಾರೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES