Wednesday, May 1, 2024

ಕಾಲೇಜಿನಲ್ಲೇ ವಿದ್ಯಾರ್ಥಿನಿ ಕೊಲೆ : 9 ಬಾರಿ ಚಾಕುವಿನಿಂದ ಇರಿದು ಕೊಂದ ಅನ್ಯಕೋಮಿನ ಯುವಕ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಪುತ್ರಿಯನ್ನು ಅನ್ಯಕೋಮಿನ ಯುವಕ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಇಂದು ಬಿವಿಬಿ ಕಾಲೇಜ್​ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಫಯಾಜ್ ಎಂಬಾತನೇ 9 ಬಾರಿ ಚಾಕುವಿನಿಂದ ಇರಿದುಕೊಂದ ಅನ್ಯಕೋಮಿನ ಯುವಕ.

ಹಾಡಹಗಲೇ ಹುಬ್ಬಳ್ಳಿಯ ಬಿವಿಬಿ ಕಾಲೇಜ್​ನಲ್ಲಿರುವಾಗಲೇ ಹತ್ಯೆ ನಡೆದಿದೆ. ಈ ಘಟನೆಯಿಂದ ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ ಮೃತದೇಹವನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಇತ್ತ, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ‌ ಮುಗಿಲು ಮುಟ್ಟಿದೆ.

ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಆರೋಪಿ ಫಯಾಜ್​ನನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಈಗಾಗಲೇ ಕೊಲೆ ಮಾಡಿರುವ ಆರೋಪಿಯನ್ನ ಬಂಧನ ಮಾಡಲಾಗಿದೆ. ನಿರಂಜನ ಹಿರಮೇಠ ನಮ್ಮ ಪಕ್ಷದ ಪಾಲಿಕೆ ಸದಸ್ಯರು. ಬಹಳ ಒಳ್ಳೆಯ ಹುಡಗಿ,ಯಾವಾಗಲೂ ಅಂಕಲ್ ಎಂದು ಕರೆಯುತ್ತಿದ್ದಳು. ಹುಬ್ಬಳ್ಳಿಯಲ್ಲಿ ಹೀಗಾಗಬಾರದಿತ್ತು ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES