ಬೆಂಗಳೂರು : ಮನೆಯ ಸಂಪ್ನಲ್ಲಿ ಬಿದ್ದು ತಾಯಿ ಹಾಗೂ ಮಗು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಯಲಹಂಕ ನ್ಯೂಟೌನ್ ಬಳಿಯ ಈಸ್ಟ್ ಕಾಲೋನಿಯಲ್ಲಿ ನಡೆದಿದೆ.
ತಾಯಿ ಕವಿತಾ (40) ಹಾಗೂ ಪುತ್ರ ಪವನ್ (8) ಮೃತ ದುರ್ದೈವಿಗಳು. ಇದು ಆತ್ಮಹತ್ಯೆಯೋ? ಅಥವಾ ಅಚನಾಕ್ಕಾಗಿ ಬಿದ್ದಿದ್ದಾರೋ? ಎಂದು ತಿಳಿದುಬಂದಿಲ್ಲ.
ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಸಂಪ್ನಿಂದ ಮೃತದೇಹ ಹೊರತೆಗೆದಿದ್ದಾರೆ. ಸಾವಿನ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ನ್ಯೂ ಟೌನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇಬ್ಬರ ಉಸಿರು ಕಸಿದ ಲಾರಿ
ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿಯ ಅಶೋಕ ಶಿಲಾಶಾಸನ ರಸ್ತೆ ಬಳಿ ನಡೆದಿದೆ. ಸಿಂಧನೂರು ಮೂಲದ ಶಾಮೀದ್ (22) ಹಾಗೂ ಸಲ್ಮಾ(10) ಮೃತರು. ಸಿಂಧನೂರಿನಿಂದ ಮುದಗಲ್ಗೆ ಮದುವೆಗೆ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಈ ಸಂಬಂಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.