Wednesday, May 1, 2024

ಟಾಸ್ ಗೆದ್ದ ಪಂಜಾಬ್ ಬೌಲಿಂಗ್ : ಮುಂಬೈ ಮೊದಲ ವಿಕೆಟ್ ಪತನ, ಇಂದು ಸೋತರೆ MI ಮನೆಗೆ?

ಬೆಂಗಳೂರು : ಮುಂಬೈ ಇಂಡಿಯನ್ಸ್​ ವಿರುದ್ಧ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ನಾಯಕ ಸ್ಯಾಮ್ ಕರ್ರನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. 8 ರನ್​ ಗಳಿಸಿ ಇಶಾನ್ ಕಿಶನ್ ಔಟಾಗಿದ್ದಾರೆ.

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂ 33ನೇ ಪಂದ್ಯ ನಡೆಯುತ್ತಿದೆ. ಮುಂಬೈ ಪ್ಲೇಆಫ್​ ರೇಸ್​ನಲ್ಲಿ ಉಳಿಯಬೇಕಾದರೆ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾಗಿದೆ.

ಮುಂಬೈ ಆಡಿರುವ 6 ಪಂದ್ಯಗಳಲ್ಲಿ 2 ಪಂದ್ಯ ಗೆದ್ದು, 4 ಪಂದ್ಯ ಸೋತಿದೆ. ಪಂಜಾಬ್​ ಆಡಿರುವ 6 ಪಂದ್ಯಗಳಲ್ಲಿ 4 ಪಂದ್ಯ ಸೋತು, 2 ಪಂದ್ಯ ಗೆದ್ದಿದೆ. ಪಾಯಿಂಟ್​​ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಹಾಗೂ ಪಂಜಾಬ್ ತಂಡಗಳು ಹೇಗಾದರೂ ಮಾಡಿ ಪಂದ್ಯ ಗೆಲ್ಲಬೇಕೆಂಬ ಹಠಕ್ಕೆ ಬಿದ್ದಿವೆ.

ಮುಂಬೈ ಇಂಡಿಯನ್ಸ್

ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿ.ಕೀ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಮೊಹಮ್ಮದ್ ನಬಿ, ರೊಮಾರಿಯೋ ಶೆಫರ್ಡ್, ಜೆರಾಲ್ಡ್ ಕೋಟ್ಜಿ, ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಗೋಪಾಲ್

ಪಂಜಾಬ್ ಕಿಂಗ್ಸ್​

ಸ್ಯಾಮ್ ಕರ್ರಾನ್ (ನಾಯಕ), ರಿಲೀ ರೊಸೊವ್, ಫ್ರಭಾಸಿಮ್ರಾನ್ ಸಿಂಗ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ಶಶಾಂಕ್ ಸಿಂಗ್,ಅಶುತೋಷ್ ಶರ್ಮಾ, ಹರ್ಷಲ್ ಪಟೇಲ್, ಅರ್ಷ್‌ದೀಪ್ ಸಿಂಗ್, ಕಗಿಸೊ ರಬಾಡ, ಹರ್‌ಪ್ರೀತ್ ಬ್ರಾರ್

RELATED ARTICLES

Related Articles

TRENDING ARTICLES