ಮಂಡ್ಯ : ಪ್ರಧಾನಿ ನರೇಂದ್ರ ಮೋದಿಗೆ ಜಿಂದಾಬಾದ್ ಹೇಳುವವರು ಅಪ್ಪನಿಗೆ ಹುಟ್ಟಿದವರು ಅಲ್ಲ ಎಂದು ಪ್ರಗತಿಪರ ಚಿಂತಕ ಪ್ರೊ. ಮಹೇಶ್ ಚಂದ್ರಗುರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿರುವ ಅವರು, ಮೋದಿ ಜಿಂದಾಬಾದ್ ಹೇಳೋರು ಅಪ್ಪನಿಗೆ ಹುಟ್ಟಿದವರು ಅಲ್ಲ. ನಮಗೆ ಕರ್ನಾಟಕ ಜಿಂದಾಬಾದ್, ಭಾರತ ಜಿಂದಾಬಾದ್ ಬೇಕು. ಯಾರು ಹೇಳಿದ್ರು ಅಷ್ಟೇ, ಮೋದಿಗೆ ಜೈ ಎನ್ನೋರು ಅಪ್ಪನಿಗೆ ಹುಟ್ಟಿದವರು ಅಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ ‘ಮೋದಿ.. ಮೋದಿ..’ ಎಂದು ಕೂಗುವ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಕಪಾಳಕ್ಕೆ ಹೊಡಿಬೇಕು ಎಂದು ಸಚಿವ ಶಿವರಾಜ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಕಠಿಣ ಶಿಕ್ಷೆ ಕೊಡಿಸುವ ಕೆಲಸ ಆಗುತ್ತೆ
ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ನೇಹಾ ಹತ್ಯೆ ವೈಯಕ್ತಿಕವಾದ ಘಟನೆ, ಅದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಕೊಲೆ ಮಾಡಿದವರ ವಿರುದ್ಧ ನಿರ್ದಾಕ್ಷೀಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? : ‘ಮೋದಿ.. ಮೋದಿ..’ ಎನ್ನುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡಿಬೇಕು : ಸಚಿವ ಶಿವರಾಜ ತಂಗಡಗಿ
ಕಾಂಗ್ರೆಸ್ ಈ ಬಗ್ಗೆ ಬೆಂಬಲ ಕೊಡಲ್ಲ
ಆರೋಪಿಗೆ ಕಠಿಣವಾದ ಶಿಕ್ಷೆ ಕೊಡಿಸುವ ಕೆಲಸ ನಮ್ಮ ಸರ್ಕಾರ ಮಾಡುತ್ತೆ. ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಒಂದು ಸಮಾಜವನ್ನು ದೂಷಿಸಬಾರದು, ನಾನು ತಪ್ಪು ಮಾಡಿದ್ರೆ ಇಡೀ ಲಿಂಗಾಯತ ಸಮಾಜ ತಪ್ಪು ಅನ್ನೋಕೆ ಆಗಲ್ಲ, ನಾವು ಯಾರನ್ನು ಸಮರ್ಥನೆ ಮಾಡಿಕೊಳ್ಳಲ್ಲ. ನಾವು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಇದು ಅತ್ಯಂತ ಹೇಯ ಕೃತ್ಯ. ಹೀಗಾಗಲೇ ಅವರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೆವೆ. ಕಾಂಗ್ರೆಸ್ ಪಕ್ಷ ಈ ಬಗ್ಗೆ ಬೆಂಬಲ ಕೊಡಲ್ಲ ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.