ಹುಬ್ಬಳ್ಳಿ : ಕಾಲೇಜು ಕ್ಯಾಂಪಸ್ನಲ್ಲಿ ಕೊಲೆಯಾದ ನೇಹಾ ಹಿರೇಮಠ ಅಂತ್ಯಕ್ರಿಯೆ ಇಂದು ನಡೆಯಲಿದೆ. ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಹಿಂದೂ ಧರ್ಮದ ಸಂಪ್ರದಾಯದಂತೆ ನೇಹಾ ಅಂತ್ಯಕ್ರಿಯೆ ನಡೆಯಲಿದೆ. ಈಗಾಗಲೇ ಕಿಮ್ಸ್ ಆಸ್ಪತ್ರೆಯಿಂದ ನೇಹಾ ಪಾರ್ಥಿವ ಶರೀರ ಮನೆಗೆ ಶಿಪ್ಟ್ ಮಾಡಲಾಗಿದೆ.
ಅಂತ್ಯಕ್ರಿಯೆಗಾಗಿ ಸಿದ್ದತಾ ಕಾರ್ಯ ಆರಂಭಗೊಂಡಿದೆ. ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಗಾಗಿ ಸಿದ್ದತಾ ಕಾರ್ಯಗಳು ಆರಂಭಗೊಂಡಿವೆ.
ಹುಬ್ಬಳ್ಳಿಯಲ್ಲಿ ಕಾಲೇಜುಗಳು ಬಂದ್
ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ ಎಲ್ಲಾ ಕಾಲೇಜುಗಳು ಬಂದ್ ಮಾಡಲಾಗಿದೆ. ABVP ಕೊಲೆ ಖಂಡಿಸಿ ಕಾಲೇಜು ಬಂದ್ಗೆ ಕರೆ ನೀಡಿದೆ. ಲವ್ ಜಿಹಾದ್ ಹಿನ್ನೆಲೆ ಕೊಲೆ ನಡೆದಿದೆ ಎಂದು ಆರೋಪಿಸಿ, ಇಂದು ಅವಳಿ ನಗರದ ಕಾಲೇಜುಗಳ ಬಂದ್ಗೆ ಕರೆ ನೀಡಲಾಗಿದೆ.
ನೇಹಾ ಕೊಲೆ ಖಂಡಿಸಿ ABVP ಪ್ರತಿಭಟನೆ
ನೇಹಾ ಕೊಲೆ ಖಂಡಿಸಿ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಮುಂಭಾಗ ಎಬಿವಿಪಿ ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಈ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಅಲ್ಲದೇ ನೇಹಾ ಕೊಂದ ಆರೋಪಿ ಫಯಾಜ್ನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದರು. ಇನ್ನೊಂದೆಡೆ ಎನ್ಎಸ್ಯುಐ ಕಾರ್ಯಕರ್ತರು ಸಹ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಮುಂಭಾಗ ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದು, ಆರೋಪಿ ಫಯಾಜ್ನನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿದೆ.