ಬೆಂಗಳೂರು : ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣದ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ರಚಿತಾ ರಾಮ್, ಕೊಲೆ ಪ್ರಕರಣದ ಆರೋಪಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಒತ್ತಾಯ ಮಾಡಿದ್ದಾರೆ.
ಜಾತಿ, ಧರ್ಮ ಯಾವುದೇ ಆಗಿರಲಿ. ಮೊದಲು ನಾವು ಮಾನವರು. ನಾನು ಈ ಪೋಸ್ಟ್ ಹಾಕಲು ಕಾರಣ ನೇಹಾಗೆ ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ ಎಂದು ರಚಿತಾ ಹೇಳಿದ್ದಾರೆ.
ಮುಂದುವರಿದು, ‘ಸರ್ಕಾರಕ್ಕೆ ನನ್ನ ಒಂದು ಮನವಿ. ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ, ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ’ ಎಂದು ಆಗ್ರಹಿಸಿದ್ದಾರೆ.
ಮೃತ ನೇಹಾ ಹಿರೇಮಠ ಫೋಟೊ ಜೊತೆಗೆ ಈ ಪೋಸ್ಟ್ ಅನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ #JusticeforNehaHiremath ಎಂದು ಹ್ಯಾಶ್ ಟ್ಯಾಗ್ ಹಾಕಿದ್ದಾರೆ.
View this post on Instagram