ಬೆಂಗಳೂರು : ನಟ ಧ್ರುವ ಸರ್ಜಾ ಅವರು ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಘಟನೆಯನ್ನು ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ಧ್ರುವ ಸರ್ಜಾ ಈ ಬಗ್ಗೆ ಧ್ವನಿ ಎತ್ತಿದ್ದಾರೆ. ಕೊಲೆ ಆರೋಪಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಹೋದರಿ ನೇಹಾ ಹಿರೇಮಠ್ ಅವರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯ ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಇದನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ ಎಂದು ನಟ ಧ್ರುವ ಸರ್ಜಾ ಅವರು ಪೋಸ್ಟ್ ಮಾಡಿದ್ದಾರೆ. ಆ ಮೂಲಕ ಅವರು ನೇಹಾ ಹಿರೇಮಠ್ ಸಾವಿಗೆ ನ್ಯಾಯ ಸಿಗಬೇಕು ಎಂದು ಧ್ವನಿ ಎತ್ತಿದ್ದಾರೆ.
ನಟರು ಮೌನವಾಗಿರುವುದಕ್ಕೆ ಅಸಮಾಧಾನ
ಈ ಬಗ್ಗೆ ಬೇರೆ ನಟರು ಮೌನವಾಗಿದ್ದಾರೆ ಎಂದು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಥ ಹೀನಾಯ ಕೃತ್ಯವನ್ನು ಎಸೆಗಿದಂತವರಿಗೆ ಕಠಿಣ ಕಾನೂನು ಕ್ರಮವನ್ನು ಜರಗಿಸಬೇಕು. ಇಂಥವರು ದೇಶದಲ್ಲಿ ಇರುವುದೇ ಅಕ್ಷಮ್ಯ ಅಪರಾಧ. ಕೂಡಲೇ ಕಾನೂನು ಕ್ರಮವನ್ನ ಜರುಗಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಕಾಮೆಂಟ್ ಮಾಡಿದ್ದಾರೆ.
ಸಹೋದರಿ ನೇಹಾ ಹಿರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ.ಕ್ಯಾಂಪಸ್ ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ.ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು.ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು 🙏
ಜೈ ಆಂಜನೇಯ 🙏 pic.twitter.com/z1gkJkEETU— Dhruva Sarja (@DhruvaSarja) April 19, 2024