ಚಿಕ್ಕಬಳ್ಳಾಪುರ : ಕಾಂಗ್ರೆಸ್ ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ . ದೇವೇಗೌಡ ಹರಿಹಾಯ್ದರು.
ಚಿಕ್ಕಬಳ್ಳಾಪುರದಲ್ಲಿ ನಡದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿ, ಚೊಂಬು ಜಾಹೀರಾತು ಕೊಟ್ಟ ಸಿಎಂ ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು ಎಂದು ವಾಗ್ದಾಳಿ ನಡೆಸಿದರು.
ಈ ಚೊಂಬನ್ನು ಕೊಟ್ಟವರು ಯಾರು? 2ಜಿ ಹಗರಣ, ಕಲ್ಲಿದ್ದಲು ಹಗರಣ ಹೀಗೆ ಹಲವಾರು ಹಗರಣಗಳ ಮೂಲಕ ದೇಶದ ಸಂಪತ್ತನ್ನು ಲೂಟಿ ಮಾಡಿತ್ತು. ದೇಶದ ಖಜಾನೆಯನ್ನು ಬರಿದು ಮಾಡಿ ಕಾಂಗ್ರೆಸ್ ಸರ್ಕಾರ ಮೋದಿ ಕೈಗೆ ಚೊಂಬು ನೀಡಿತ್ತು. ಕಾಂಗ್ರೆಸ್ ಕೊಟ್ಟಿದ್ದ ಖಾಲಿ ಚೊಂಬನ್ನು ಮೋದಿ ಅಕ್ಷಯಪಾತ್ರೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು
ಮೋದಿ ಅಧಿಕಾರಕ್ಕೆ ಬಂದು ಸಣ್ಣ ವರ್ಗದವರನ್ನೇ ಮೇಲಕ್ಕೆ ಎತ್ತಿದ್ದಾರೆ. ದೇಶದಲ್ಲಿ ವಿಪಕ್ಷ ಸ್ಥಾನ ಪಡೆಯುವ ಯೋಗ್ಯತೆಯೂ ಕಾಂಗ್ರೆಸ್ಗೆ ಇಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್ ಈ ರಾಜ್ಯವನ್ನು ಲೂಟಿ ಮಾಡಿದ್ದಾರೆ. ಚೊಂಬು ಜಾಹೀರಾತು ಕೊಟ್ಟ ಸಿಎಂ ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು. ಈ ರಾಜ್ಯದಲ್ಲಿ 28 ಸ್ಥಾನಗಳಲ್ಲೂ ಎನ್ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ.