ಉತ್ತರ ಕನ್ನಡ : ನದಿಯಲ್ಲಿ ಮುಳುಗಿ ಆರು ಮಂದಿ ಪ್ರವಾಸಿಗರು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿಯಲ್ಲಿ ನಡೆದಿದೆ.
ಅಕ್ವಾಡ ಗ್ರಾಮದ ಕಾಳಿ ನದಿಯಲ್ಲಿ ಇಬ್ಬರು ಬಾಲಕರು ಸೇರಿದಂತೆ ಆರು ಮಂದಿ ನೀರುಪಾಲಾಗಿದ್ದಾರೆ. ಜೀರ್ ಅಹ್ಮದ್ (40) ಅಲ್ಛೀಯಾ (10), ಮೋಹಿನ್ (6), ರೇಷ್ಮಾ ಉನ್ನಿಸಾ (38), ಇಫ್ರಾ (15), ಅಬೀದ್ (12) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಮೃತರು ಹುಬ್ಬಳ್ಳಿ ಮೂಲದವರು ಎಂದು ತಿಳಿದುಬಂದಿದೆ. ಐದು ಮಂದಿಯ ಶವ ಪತ್ತೆಯಾಗಿದ್ದು, ಮತ್ತೊಬ್ಬರಿಗಾಗಿ ತೀವ್ರ ಹುಡುಕಾಟ ನಡೆದಿದೆ. ಒಂದೇ ಕುಟುಂಬದ 8 ಮಂದಿ ಪ್ರವಾಸಕ್ಕೆಂದು ದಾಂಡೇಲಿಗೆ ಬಂದಿದ್ದರು. ಕಾಳಿ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಕಾಲು ಜಾರಿ ನದಿ ಬಿದ್ದಿದ್ದಾರೆ.
ಸ್ಥಳಕ್ಕೆ ದಾಂಡೇಲಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.